ಕ್ರೀಡೆ

ಹೊಸ ಇನ್ನಿಂಗ್ಸ್‌ ಆರಂಭಿಸಿದ ಋತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ ಸಿಎಸ್‌ಕೆ ಪ್ಲೇಯರ್

ಮಹಾರಾಷ್ಟ್ರ: ಚೆನ್ನೈ ಸೂಪರ್‌ ಕಿಂಗ್ಸ್‌ ಸ್ಟಾರ್‌ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ.

ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್‌ ನಲ್ಲಿ ಬ್ಯಾಟಿಂಗ್‌ ನಿಂದ ಸ್ಪೋಟಕ ಆಟವನ್ನಾಡಿದ ಋತುರಾಜ್ ಐಪಿಎಲ್‌ ಮುಗಿದ ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ವಿಶೇಷವೆಂದರೆ ಋತ್‌ರಾಜ್‌ ಅವರ ಪತ್ನಿ ಕೂಡ ಕ್ರಿಕೆಟ್‌ ಆಟಗಾರ್ತಿ ಆಗಿದ್ದು, 24 ವರ್ಷದ ಉತ್ಕರ್ಷ ದೇಶಿಯ ತಂಡದಲ್ಲಿ ಆಡಿದ್ದಾರೆ. ಮಹಾರಾಷ್ಟ್ರದ ಪರವಾಗಿ ದೇಶಿಯ ಟೂರ್ನಿಯಲ್ಲಿ ಉತ್ಕರ್ಷ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಚೆನ್ನೈ ಐಪಿಎಲ್‌ ಟ್ರೋಫಿ ಗೆದ್ದ ಬಳಿಕ ಮೈದಾನದಲ್ಲಿ ಋತುರಾಜ್‌  ಹಾಗೂ ಧೋನಿ ಅವರೊಂದಿಗೆ ಫೋಟೋಗೆ ಪೋಸ್‌ ಕೊಟ್ಟು ಅದನ್ನು ಪೋಸ್ಟ್‌ ಮಾಡಿದ್ದರು.

ತಮ್ಮ ಮದುವೆಯ ಫೋಟೋಗಳನ್ನು ಹಂಚಿಕೊಂಡಿರುವ ರುತ್‌ರಾಜ್ “From the pitch to the altar, our journey begins!” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್ ಮತ್ತು ಉಮ್ರಾನ್ ಮಲಿಕ್ ಹಾಗೂ ಇತರ ಆಟಗಾರರು ಕಮೆಂಟ್‌ ಮಾಡಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್ ನ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

10 mins ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

24 mins ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

50 mins ago

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

1 hour ago

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

1 hour ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

3 hours ago