ಮಹಾರಾಷ್ಟ್ರ: ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್ ನಲ್ಲಿ ಬ್ಯಾಟಿಂಗ್ ನಿಂದ ಸ್ಪೋಟಕ ಆಟವನ್ನಾಡಿದ ಋತುರಾಜ್ ಐಪಿಎಲ್ ಮುಗಿದ ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ವಿಶೇಷವೆಂದರೆ ಋತ್ರಾಜ್ ಅವರ ಪತ್ನಿ ಕೂಡ ಕ್ರಿಕೆಟ್ ಆಟಗಾರ್ತಿ ಆಗಿದ್ದು, 24 ವರ್ಷದ ಉತ್ಕರ್ಷ ದೇಶಿಯ ತಂಡದಲ್ಲಿ ಆಡಿದ್ದಾರೆ. ಮಹಾರಾಷ್ಟ್ರದ ಪರವಾಗಿ ದೇಶಿಯ ಟೂರ್ನಿಯಲ್ಲಿ ಉತ್ಕರ್ಷ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಚೆನ್ನೈ ಐಪಿಎಲ್ ಟ್ರೋಫಿ ಗೆದ್ದ ಬಳಿಕ ಮೈದಾನದಲ್ಲಿ ಋತುರಾಜ್ ಹಾಗೂ ಧೋನಿ ಅವರೊಂದಿಗೆ ಫೋಟೋಗೆ ಪೋಸ್ ಕೊಟ್ಟು ಅದನ್ನು ಪೋಸ್ಟ್ ಮಾಡಿದ್ದರು.
ತಮ್ಮ ಮದುವೆಯ ಫೋಟೋಗಳನ್ನು ಹಂಚಿಕೊಂಡಿರುವ ರುತ್ರಾಜ್ “From the pitch to the altar, our journey begins!” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್ ಮತ್ತು ಉಮ್ರಾನ್ ಮಲಿಕ್ ಹಾಗೂ ಇತರ ಆಟಗಾರರು ಕಮೆಂಟ್ ಮಾಡಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ನ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…