ಕ್ರೀಡೆ

ಹೊಸ ಇನ್ನಿಂಗ್ಸ್‌ ಆರಂಭಿಸಿದ ಋತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ ಸಿಎಸ್‌ಕೆ ಪ್ಲೇಯರ್

ಮಹಾರಾಷ್ಟ್ರ: ಚೆನ್ನೈ ಸೂಪರ್‌ ಕಿಂಗ್ಸ್‌ ಸ್ಟಾರ್‌ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ.

ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್‌ ನಲ್ಲಿ ಬ್ಯಾಟಿಂಗ್‌ ನಿಂದ ಸ್ಪೋಟಕ ಆಟವನ್ನಾಡಿದ ಋತುರಾಜ್ ಐಪಿಎಲ್‌ ಮುಗಿದ ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ವಿಶೇಷವೆಂದರೆ ಋತ್‌ರಾಜ್‌ ಅವರ ಪತ್ನಿ ಕೂಡ ಕ್ರಿಕೆಟ್‌ ಆಟಗಾರ್ತಿ ಆಗಿದ್ದು, 24 ವರ್ಷದ ಉತ್ಕರ್ಷ ದೇಶಿಯ ತಂಡದಲ್ಲಿ ಆಡಿದ್ದಾರೆ. ಮಹಾರಾಷ್ಟ್ರದ ಪರವಾಗಿ ದೇಶಿಯ ಟೂರ್ನಿಯಲ್ಲಿ ಉತ್ಕರ್ಷ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಚೆನ್ನೈ ಐಪಿಎಲ್‌ ಟ್ರೋಫಿ ಗೆದ್ದ ಬಳಿಕ ಮೈದಾನದಲ್ಲಿ ಋತುರಾಜ್‌  ಹಾಗೂ ಧೋನಿ ಅವರೊಂದಿಗೆ ಫೋಟೋಗೆ ಪೋಸ್‌ ಕೊಟ್ಟು ಅದನ್ನು ಪೋಸ್ಟ್‌ ಮಾಡಿದ್ದರು.

ತಮ್ಮ ಮದುವೆಯ ಫೋಟೋಗಳನ್ನು ಹಂಚಿಕೊಂಡಿರುವ ರುತ್‌ರಾಜ್ “From the pitch to the altar, our journey begins!” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್ ಮತ್ತು ಉಮ್ರಾನ್ ಮಲಿಕ್ ಹಾಗೂ ಇತರ ಆಟಗಾರರು ಕಮೆಂಟ್‌ ಮಾಡಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್ ನ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

andolanait

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

9 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

10 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

12 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

12 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

16 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

17 hours ago