ಕ್ರೀಡೆ

ಹೊಸ ಇನ್ನಿಂಗ್ಸ್‌ ಆರಂಭಿಸಿದ ಋತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ ಸಿಎಸ್‌ಕೆ ಪ್ಲೇಯರ್

ಮಹಾರಾಷ್ಟ್ರ: ಚೆನ್ನೈ ಸೂಪರ್‌ ಕಿಂಗ್ಸ್‌ ಸ್ಟಾರ್‌ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ.

ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್‌ ನಲ್ಲಿ ಬ್ಯಾಟಿಂಗ್‌ ನಿಂದ ಸ್ಪೋಟಕ ಆಟವನ್ನಾಡಿದ ಋತುರಾಜ್ ಐಪಿಎಲ್‌ ಮುಗಿದ ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ವಿಶೇಷವೆಂದರೆ ಋತ್‌ರಾಜ್‌ ಅವರ ಪತ್ನಿ ಕೂಡ ಕ್ರಿಕೆಟ್‌ ಆಟಗಾರ್ತಿ ಆಗಿದ್ದು, 24 ವರ್ಷದ ಉತ್ಕರ್ಷ ದೇಶಿಯ ತಂಡದಲ್ಲಿ ಆಡಿದ್ದಾರೆ. ಮಹಾರಾಷ್ಟ್ರದ ಪರವಾಗಿ ದೇಶಿಯ ಟೂರ್ನಿಯಲ್ಲಿ ಉತ್ಕರ್ಷ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಚೆನ್ನೈ ಐಪಿಎಲ್‌ ಟ್ರೋಫಿ ಗೆದ್ದ ಬಳಿಕ ಮೈದಾನದಲ್ಲಿ ಋತುರಾಜ್‌  ಹಾಗೂ ಧೋನಿ ಅವರೊಂದಿಗೆ ಫೋಟೋಗೆ ಪೋಸ್‌ ಕೊಟ್ಟು ಅದನ್ನು ಪೋಸ್ಟ್‌ ಮಾಡಿದ್ದರು.

ತಮ್ಮ ಮದುವೆಯ ಫೋಟೋಗಳನ್ನು ಹಂಚಿಕೊಂಡಿರುವ ರುತ್‌ರಾಜ್ “From the pitch to the altar, our journey begins!” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್ ಮತ್ತು ಉಮ್ರಾನ್ ಮಲಿಕ್ ಹಾಗೂ ಇತರ ಆಟಗಾರರು ಕಮೆಂಟ್‌ ಮಾಡಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್ ನ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

11 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

11 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

11 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

11 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

12 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

12 hours ago