ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ೧೯೮೩ ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ೩೬ ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ ನೇಮಕವನ್ನು ಪ್ರಕಟಿಸಲಾಯಿತು. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಉತ್ತರಾಧಿಕಾರಿಯಾಗಿ ಬಿನ್ನಿ ಆಯ್ಕೆಯಾಗಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ೬೭ ವರ್ಷದ ಬಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಲಿರುವುದರಿಂದ ಮುಂದಿನ ಪದಾಧಿಕಾರಿಗಳ ಆಯ್ಕೆ ಕೇವಲ ಔಪಚಾರಿಕವಾಗಿತ್ತು. ಬಿನ್ನಿ ಅವರು ಸದ್ಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಈಗ ರಾಜ್ಯ ಸಂಸ್ಥೆಯಲ್ಲಿ ತಮ್ಮ ಸ್ಥಾನವನ್ನು ತೊರೆಯಲಿದ್ದಾರೆ.
ಮಧ್ಯಮ ವೇಗಿ ೧೯೮೩ ರಲ್ಲಿ ಭಾರತದ ಐತಿಹಾಸಿಕ ವಿಶ್ವಕಪ್ ವಿಜಯದ ರೂವಾರಿಗಳಲ್ಲಿ ಒಬ್ಬರಾಗಿದ್ದರು. ವಿಶ್ವಕಪ್ನ ಎಂಟು ಪಂದ್ಯಗಳಲ್ಲಿ ಅವರು ೧೮ ವಿಕೆಟ್ಗಳನ್ನು ಪಡೆದಿದ್ದರು. ಇದು ಪ್ರತಿಷ್ಠಿತ ಪಂದ್ಯಾವಳಿಯ ೧೯೮೩ರ ಆವೃತ್ತಿಯಲ್ಲಿ ಬೌಲರ್ನ ಅತ್ಯುತ್ತಮ ಸಾಧನೆಯಾಗಿತ್ತು.
ರೋಜರ್ ಬಿನ್ನಿ ಜನನ 19-07-1955
ಬಲಗೈ ಬ್ಯಾಟ್ಸ್ಮನ್
ಮಧ್ಯಮ ವೇಗದ ಬೌಲರ್
ಮೊದಲ ಟೆಸ್ಟ್ 21-11-1979
ಕೊನೆಯ ಟೆಸ್ಟ್ 13-03-1987
ಮೊದಲ ಒಡಿಐ 06-12-1980
ಕೊನೆಯ ಒಡಿಐ 13-03-1987
ಸಾಧನೆ ಟೆಸ್ಟ್ ಒಡಿಐ
ಆಡಿದ ಪಂದ್ಯ 27 72
ರನ್ಗಳು 830 629
ಅರ್ಧ ಶತಕ 05 01
ಅತಿಹೆಚ್ಚು ಸ್ಕೋರ್ 83 57
ವಿಕೆಟ್ಗಳು 47 77
ಕ್ಯಾಚ್ಗಳು 11 01
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…