ಕ್ರೀಡೆ

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ೧೯೮೩ ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ೩೬ ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ ನೇಮಕವನ್ನು ಪ್ರಕಟಿಸಲಾಯಿತು. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಉತ್ತರಾಧಿಕಾರಿಯಾಗಿ ಬಿನ್ನಿ ಆಯ್ಕೆಯಾಗಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ೬೭ ವರ್ಷದ ಬಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಲಿರುವುದರಿಂದ ಮುಂದಿನ ಪದಾಧಿಕಾರಿಗಳ ಆಯ್ಕೆ ಕೇವಲ ಔಪಚಾರಿಕವಾಗಿತ್ತು. ಬಿನ್ನಿ ಅವರು ಸದ್ಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಈಗ ರಾಜ್ಯ ಸಂಸ್ಥೆಯಲ್ಲಿ ತಮ್ಮ ಸ್ಥಾನವನ್ನು ತೊರೆಯಲಿದ್ದಾರೆ.

ಮಧ್ಯಮ ವೇಗಿ ೧೯೮೩ ರಲ್ಲಿ ಭಾರತದ ಐತಿಹಾಸಿಕ ವಿಶ್ವಕಪ್ ವಿಜಯದ ರೂವಾರಿಗಳಲ್ಲಿ ಒಬ್ಬರಾಗಿದ್ದರು. ವಿಶ್ವಕಪ್‌ನ ಎಂಟು ಪಂದ್ಯಗಳಲ್ಲಿ ಅವರು ೧೮ ವಿಕೆಟ್‌ಗಳನ್ನು ಪಡೆದಿದ್ದರು. ಇದು ಪ್ರತಿಷ್ಠಿತ ಪಂದ್ಯಾವಳಿಯ ೧೯೮೩ರ ಆವೃತ್ತಿಯಲ್ಲಿ ಬೌಲರ್‌ನ ಅತ್ಯುತ್ತಮ ಸಾಧನೆಯಾಗಿತ್ತು.

ರೋಜರ್ ಬಿನ್ನಿ ಜನನ   19-07-1955
ಬಲಗೈ ಬ್ಯಾಟ್ಸ್‌ಮನ್
ಮಧ್ಯಮ ವೇಗದ ಬೌಲರ್

ಮೊದಲ ಟೆಸ್ಟ್                                  21-11-1979
ಕೊನೆಯ ಟೆಸ್ಟ್                                13-03-1987
ಮೊದಲ ಒಡಿಐ                                06-12-1980
ಕೊನೆಯ ಒಡಿಐ                              13-03-1987

ಸಾಧನೆ                                         ಟೆಸ್ಟ್                                                ಒಡಿಐ
ಆಡಿದ ಪಂದ್ಯ                                  27                                                    72
ರನ್‌ಗಳು                                      830                                                629
ಅರ್ಧ ಶತಕ                                    05                                                    01
ಅತಿಹೆಚ್ಚು ಸ್ಕೋರ್                           83                                                   57
ವಿಕೆಟ್‌ಗಳು                                     47                                                   77
ಕ್ಯಾಚ್‌ಗಳು                                      11                                                 01

andolana

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

6 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

8 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

9 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

10 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

10 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

10 hours ago