ಕ್ರೀಡೆ

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ೧೯೮೩ ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ೩೬ ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ ನೇಮಕವನ್ನು ಪ್ರಕಟಿಸಲಾಯಿತು. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಉತ್ತರಾಧಿಕಾರಿಯಾಗಿ ಬಿನ್ನಿ ಆಯ್ಕೆಯಾಗಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ೬೭ ವರ್ಷದ ಬಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಲಿರುವುದರಿಂದ ಮುಂದಿನ ಪದಾಧಿಕಾರಿಗಳ ಆಯ್ಕೆ ಕೇವಲ ಔಪಚಾರಿಕವಾಗಿತ್ತು. ಬಿನ್ನಿ ಅವರು ಸದ್ಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಈಗ ರಾಜ್ಯ ಸಂಸ್ಥೆಯಲ್ಲಿ ತಮ್ಮ ಸ್ಥಾನವನ್ನು ತೊರೆಯಲಿದ್ದಾರೆ.

ಮಧ್ಯಮ ವೇಗಿ ೧೯೮೩ ರಲ್ಲಿ ಭಾರತದ ಐತಿಹಾಸಿಕ ವಿಶ್ವಕಪ್ ವಿಜಯದ ರೂವಾರಿಗಳಲ್ಲಿ ಒಬ್ಬರಾಗಿದ್ದರು. ವಿಶ್ವಕಪ್‌ನ ಎಂಟು ಪಂದ್ಯಗಳಲ್ಲಿ ಅವರು ೧೮ ವಿಕೆಟ್‌ಗಳನ್ನು ಪಡೆದಿದ್ದರು. ಇದು ಪ್ರತಿಷ್ಠಿತ ಪಂದ್ಯಾವಳಿಯ ೧೯೮೩ರ ಆವೃತ್ತಿಯಲ್ಲಿ ಬೌಲರ್‌ನ ಅತ್ಯುತ್ತಮ ಸಾಧನೆಯಾಗಿತ್ತು.

ರೋಜರ್ ಬಿನ್ನಿ ಜನನ   19-07-1955
ಬಲಗೈ ಬ್ಯಾಟ್ಸ್‌ಮನ್
ಮಧ್ಯಮ ವೇಗದ ಬೌಲರ್

ಮೊದಲ ಟೆಸ್ಟ್                                  21-11-1979
ಕೊನೆಯ ಟೆಸ್ಟ್                                13-03-1987
ಮೊದಲ ಒಡಿಐ                                06-12-1980
ಕೊನೆಯ ಒಡಿಐ                              13-03-1987

ಸಾಧನೆ                                         ಟೆಸ್ಟ್                                                ಒಡಿಐ
ಆಡಿದ ಪಂದ್ಯ                                  27                                                    72
ರನ್‌ಗಳು                                      830                                                629
ಅರ್ಧ ಶತಕ                                    05                                                    01
ಅತಿಹೆಚ್ಚು ಸ್ಕೋರ್                           83                                                   57
ವಿಕೆಟ್‌ಗಳು                                     47                                                   77
ಕ್ಯಾಚ್‌ಗಳು                                      11                                                 01

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago