ಕ್ರೀಡೆ

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ೧೯೮೩ ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ೩೬ ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ ನೇಮಕವನ್ನು ಪ್ರಕಟಿಸಲಾಯಿತು. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಉತ್ತರಾಧಿಕಾರಿಯಾಗಿ ಬಿನ್ನಿ ಆಯ್ಕೆಯಾಗಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ೬೭ ವರ್ಷದ ಬಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಲಿರುವುದರಿಂದ ಮುಂದಿನ ಪದಾಧಿಕಾರಿಗಳ ಆಯ್ಕೆ ಕೇವಲ ಔಪಚಾರಿಕವಾಗಿತ್ತು. ಬಿನ್ನಿ ಅವರು ಸದ್ಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಈಗ ರಾಜ್ಯ ಸಂಸ್ಥೆಯಲ್ಲಿ ತಮ್ಮ ಸ್ಥಾನವನ್ನು ತೊರೆಯಲಿದ್ದಾರೆ.

ಮಧ್ಯಮ ವೇಗಿ ೧೯೮೩ ರಲ್ಲಿ ಭಾರತದ ಐತಿಹಾಸಿಕ ವಿಶ್ವಕಪ್ ವಿಜಯದ ರೂವಾರಿಗಳಲ್ಲಿ ಒಬ್ಬರಾಗಿದ್ದರು. ವಿಶ್ವಕಪ್‌ನ ಎಂಟು ಪಂದ್ಯಗಳಲ್ಲಿ ಅವರು ೧೮ ವಿಕೆಟ್‌ಗಳನ್ನು ಪಡೆದಿದ್ದರು. ಇದು ಪ್ರತಿಷ್ಠಿತ ಪಂದ್ಯಾವಳಿಯ ೧೯೮೩ರ ಆವೃತ್ತಿಯಲ್ಲಿ ಬೌಲರ್‌ನ ಅತ್ಯುತ್ತಮ ಸಾಧನೆಯಾಗಿತ್ತು.

ರೋಜರ್ ಬಿನ್ನಿ ಜನನ   19-07-1955
ಬಲಗೈ ಬ್ಯಾಟ್ಸ್‌ಮನ್
ಮಧ್ಯಮ ವೇಗದ ಬೌಲರ್

ಮೊದಲ ಟೆಸ್ಟ್                                  21-11-1979
ಕೊನೆಯ ಟೆಸ್ಟ್                                13-03-1987
ಮೊದಲ ಒಡಿಐ                                06-12-1980
ಕೊನೆಯ ಒಡಿಐ                              13-03-1987

ಸಾಧನೆ                                         ಟೆಸ್ಟ್                                                ಒಡಿಐ
ಆಡಿದ ಪಂದ್ಯ                                  27                                                    72
ರನ್‌ಗಳು                                      830                                                629
ಅರ್ಧ ಶತಕ                                    05                                                    01
ಅತಿಹೆಚ್ಚು ಸ್ಕೋರ್                           83                                                   57
ವಿಕೆಟ್‌ಗಳು                                     47                                                   77
ಕ್ಯಾಚ್‌ಗಳು                                      11                                                 01

andolana

Recent Posts

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

1 hour ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

7 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

8 hours ago

ಲಕ್ನೋ: ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…

9 hours ago