ಕ್ರೀಡೆ

ವಿಶ್ವಕಪ್‌ ವಿಜಯೋತ್ಸವ: ತೆರೆದ ವಾಹನದಲ್ಲಿ 9 ಕಿಮೀ ಮೆರವಣಿಗೆ ಹೊರಟ ರೋಹಿತ್‌ ಅಂಡ್‌ ಟೀಂ

ಮುಂಬೈ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡಿದೆ.

ಫೈನಲ್‌ ಪಂದ್ಯದಲ್ಲಿ ಚೋಕರ್ಸ್‌ ಸೌಥ್‌ ಆಫ್ರಿಕಾ ತಂಡವನ್ನು ಮಣಿಸಿ 7ರನ್‌ ಗಳ ಅಂತರದಿಂದ ವಿಶ್ವಕಪ್‌ ಫೈನಲ್‌ನಲ್ಲಿ ಗೆಲುವು ದಾಖಲಿಸಿತು. ಆ ಮೂಲಕ 17 ವರ್ಷಗಳ ಬಳಿಕ ಟೀಂ ಇಂಡಿಯಾ ಟ್ರೋಫಿ ಎತ್ತಿ ಹಿಡಿದಿತ್ತು.

ಇನ್ನು ವೆಸ್ಟ್‌ ಇಂಡೀಸ್‌ನಿಂದ ಭಾರತಕ್ಕೆ ಬಂದಿಳಿದ ಟೀಂ ಇಂಡಿಯಾ ಆಟಗಾರರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ನವದೆಹಲಿಗೆ ಆಗಮಿಸಿದ ಟೀಂ ಇಂಡಿಯಾ ಆಟಗಾರರನ್ನು ಮೋದಿ ಸ್ವಾಗತಿಸಿ ಅಭಿನಂದಿಸಿದರು. ಬಳಿಕ ಅಲ್ಲಿಂದ ನಿರ್ಗಮಿಸಿದ ಟೀಂ ಇಂಡಿಯಾ ಆಟಗಾರರು ಸೀದಾ ಮುಂಬೈಗೆ ಬಂದಿಳಿದರು.

ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್‌ ಎರಡರಲ್ಲಿ ಬಂದಿಳಿದರು. ಅಲ್ಲಿಂದ ಮುಂಬೈ ಕಡಲತೀರ ಮರೀನಾ ಡ್ರೈವ್‌ನಿಂದ ಸುಮಾರು 9 ಕಿಮೀ ವರೆಗೆ ತೆರೆದ ವಾಹನದಲ್ಲಿ ಟೀಂ ಇಂಡಿಯಾ ಆಟಗಾರರು ವಿಶ್ವಕಪ್‌ ಟ್ರೋಫಿ ಪ್ರದರ್ಶಿಸಿ ಮೆರವಣಿಗೆ ಹೊರಟರು.

ತಮ್ಮ ತಂಡದ ಗೆಲುವಿಗಾಗಿ ಪ್ರಾರ್ಥಿಸಿದ ಕೋಟ್ಯಾಂತರ ಮಂದಿ ಅಭಿಮಾನಿಗಳ ಕಡೆ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಹಾರ್ದಿಕ್‌ ಪಾಂಡ್ಯ ಅವರು ಕೈ ಬೀಸಿದರು.

ಇನ್ನು ಕಡಲತೀರದ ಕಿನಾರೆಯಲ್ಲಿ ಜಮಾಯಿಸಿದ್ದ ಲಕ್ಷಾಂತರ ಮಂದಿ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಂಡರು. ಇನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದ ಕಡೆ ನಡೆದ ಮೆರವಣಿಗೆ ಬಳಿಕ ಸ್ಟೇಡಿಯಂನಲ್ಲಿ ನೆರೆದಿರುವ ಸಾವಿರಾರು ಅಭಿಮಾನಿಗಳನ್ನು ಟೀಂ ಇಂಡಿಯಾ ಆಟಗಾರರು ಭೇಟಿಯಾಗಲಿದ್ದಾರೆ.

ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ತಂಡಕ್ಕೆ ಬಿಸಿಸಿಐ ವತಿಯಿಂದ ಗೌರವ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಆಟಗಾರರನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಕಾರ್ಯದರ್ಶಿ ಜೈ ಶಾ ಅಭಿನಂದಿಸಲಿದ್ದಾರೆ. ಬಳಿಕ ಈ ಹಿಂದೆಯೇ ಪ್ರಕಟಿಸಿರುವಂತೆ 125 ಕೋಟಿ ಬಹುಮಾನದ ಹಣ ತಂಡದ ಪಾಲಾಗಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

6 mins ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

36 mins ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

59 mins ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

1 hour ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

2 hours ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

2 hours ago