ಮುಂಬೈ: ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡಿದೆ.
ಫೈನಲ್ ಪಂದ್ಯದಲ್ಲಿ ಚೋಕರ್ಸ್ ಸೌಥ್ ಆಫ್ರಿಕಾ ತಂಡವನ್ನು ಮಣಿಸಿ 7ರನ್ ಗಳ ಅಂತರದಿಂದ ವಿಶ್ವಕಪ್ ಫೈನಲ್ನಲ್ಲಿ ಗೆಲುವು ದಾಖಲಿಸಿತು. ಆ ಮೂಲಕ 17 ವರ್ಷಗಳ ಬಳಿಕ ಟೀಂ ಇಂಡಿಯಾ ಟ್ರೋಫಿ ಎತ್ತಿ ಹಿಡಿದಿತ್ತು.
ಇನ್ನು ವೆಸ್ಟ್ ಇಂಡೀಸ್ನಿಂದ ಭಾರತಕ್ಕೆ ಬಂದಿಳಿದ ಟೀಂ ಇಂಡಿಯಾ ಆಟಗಾರರನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ನವದೆಹಲಿಗೆ ಆಗಮಿಸಿದ ಟೀಂ ಇಂಡಿಯಾ ಆಟಗಾರರನ್ನು ಮೋದಿ ಸ್ವಾಗತಿಸಿ ಅಭಿನಂದಿಸಿದರು. ಬಳಿಕ ಅಲ್ಲಿಂದ ನಿರ್ಗಮಿಸಿದ ಟೀಂ ಇಂಡಿಯಾ ಆಟಗಾರರು ಸೀದಾ ಮುಂಬೈಗೆ ಬಂದಿಳಿದರು.
ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್ ಎರಡರಲ್ಲಿ ಬಂದಿಳಿದರು. ಅಲ್ಲಿಂದ ಮುಂಬೈ ಕಡಲತೀರ ಮರೀನಾ ಡ್ರೈವ್ನಿಂದ ಸುಮಾರು 9 ಕಿಮೀ ವರೆಗೆ ತೆರೆದ ವಾಹನದಲ್ಲಿ ಟೀಂ ಇಂಡಿಯಾ ಆಟಗಾರರು ವಿಶ್ವಕಪ್ ಟ್ರೋಫಿ ಪ್ರದರ್ಶಿಸಿ ಮೆರವಣಿಗೆ ಹೊರಟರು.
ತಮ್ಮ ತಂಡದ ಗೆಲುವಿಗಾಗಿ ಪ್ರಾರ್ಥಿಸಿದ ಕೋಟ್ಯಾಂತರ ಮಂದಿ ಅಭಿಮಾನಿಗಳ ಕಡೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅವರು ಕೈ ಬೀಸಿದರು.
ಇನ್ನು ಕಡಲತೀರದ ಕಿನಾರೆಯಲ್ಲಿ ಜಮಾಯಿಸಿದ್ದ ಲಕ್ಷಾಂತರ ಮಂದಿ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಂಡರು. ಇನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದ ಕಡೆ ನಡೆದ ಮೆರವಣಿಗೆ ಬಳಿಕ ಸ್ಟೇಡಿಯಂನಲ್ಲಿ ನೆರೆದಿರುವ ಸಾವಿರಾರು ಅಭಿಮಾನಿಗಳನ್ನು ಟೀಂ ಇಂಡಿಯಾ ಆಟಗಾರರು ಭೇಟಿಯಾಗಲಿದ್ದಾರೆ.
ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ತಂಡಕ್ಕೆ ಬಿಸಿಸಿಐ ವತಿಯಿಂದ ಗೌರವ ಸಮರ್ಪಣಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾ ಆಟಗಾರರನ್ನು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಜೈ ಶಾ ಅಭಿನಂದಿಸಲಿದ್ದಾರೆ. ಬಳಿಕ ಈ ಹಿಂದೆಯೇ ಪ್ರಕಟಿಸಿರುವಂತೆ 125 ಕೋಟಿ ಬಹುಮಾನದ ಹಣ ತಂಡದ ಪಾಲಾಗಲಿದೆ.
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…