ಮುಂಬೈ: ಇದೇ 23 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದ ನಡುವಿನ ರಣಜಿ ಪಂದ್ಯದಲ್ಲಿ ಮುಂಬೈ ತಂಡದ ಪರವಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಆಡಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿ, ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಲ್ಲಿ ರೋಹಿತ್ ಶರ್ಮಾ ಫಾರ್ಮ್ ಕೊರತೆ ಅನುಭವಿಸಿದರು.
ಮುಂಬರುವ ಚಾಂಪಿಯನ್ಸ್ ಟ್ರೋಫಿಯ ದೃಷ್ಠಿಕೋನದಿಂದ ಮತ್ತೆ ಫಾರ್ಮ್ ಕಂಡುಕೊಳ್ಳಲು ರೋಹಿತ್ ಶರ್ಮಾ ರಣಜಿ ಪಂದ್ಯದಲ್ಲಿ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಒಪ್ಪಂದಕ್ಕೆ ಒಳಪಟ್ಟಿರುವ ಎಲ್ಲ ಆಟಗಾರರು ದೇಶಿಯ ಪಂದ್ಯಗಳನ್ನು ಆಡುವುದು ಕಡ್ಡಾಯ ಎಂದು ಬಿಸಿಸಿಐ ಇತ್ತೀಚಿಗೆ ತಿಳಿಸಿದೆ.
ಮುಂಬೈ ತಂಡ: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಯುಷ್ ಮ್ಹಾತ್ರೆ, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಶಿವಂ ದುಬೆ, ಹಾರದಿಕ್ ತಮೋರ್, ಆಕಾಶ್ ಆನಂದ್, ತನುಷ್ ಕೋಟ್ಯಾನ್, ಶಮ್ಸ್ ಮುಲಾನಿ, ಹಿಮಾಂಶು ಸಿಂಗ್, ಶಾರ್ದೂಲ್ ಠಾಕೂರ್.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…