ಕ್ರೀಡೆ

ರೋಹಿತ್-ಕೊಹ್ಲಿ ವಿಶ್ವಶ್ರೇಷ್ಠ ಆಟಗಾರರು: ಬಾಬರ್ ಆಝಮ್

ಬೆಂಗಳೂರು : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರರು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಮ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ಸ್ಟಾರ್ ಸ್ಪೋಟ್ರ್ಸ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ ಬಲಗೈ ಬ್ಯಾಟರ್ ಗೆ ವಿಶ್ವದ ನಿಮ್ಮ ಅತ್ಯುತ್ತಮ ಕ್ರಿಕೆಟಿಗರ ಹೆಸರನ್ನು ತಿಳಿಸಿ ಎಂದು ಕೇಳಿದಾಗ, ಬಾಬರ್ ಆಝಮ್, ರೋಹಿತ್ ಶರ್ಮಾ , ವಿರಾಟ್ ಕೊಹ್ಲಿ ಹಾಗೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

ನಾನು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೇನ್ ವಿಲಿಯಮ್ಸ್ ಅವರ ಹೆಸರ ತೆಗೆದುಕೊಳ್ಳಲು ಬಯಸುತ್ತೇನೆ. ಏಕೆಂದರೆ ನಾನು ಅವರ ಆಟವನ್ನು ಅನುಕರಿಸುತ್ತೇನೆ. ಅವರು ವಿಶ್ವದ ಅತ್ಯಂತ ಪರಿಣಾಮಕಾರಿ ಆಟಗಾರರಾಗಿದ್ದಾರೆ. ಅಲ್ಲದೆ ವಿಶ್ವದ ಅತಿ ಶ್ರೇಷ್ಠ ಬ್ಯಾಟರ್ಸ್‍ಗಳಾಗಿದ್ದಾರೆ. ಅವರು ಪಂದ್ಯದ ಸಂಕಷ್ಟದ ಪರಿಸ್ಥಿತಿಯನ್ನು ತುಂಬಾ ಸೂಕ್ಷ್ಮವಾಗಿ ಅದರಿಂದ ಹೇಗೆ ಹೊರಬರಬೇಕೆಂಬುದನ್ನು ತುಂಬಾ ಚೆನ್ನಾಗಿ ಅರಿತುಕೊಂಡಿದ್ದಾರೆ. ಆದ್ದರಿಂದಲೇ ಅವರು ವಿಶ್ವದ ಉತ್ತಮ ಆಟಗಾರರಾಗಿದ್ದಾರೆ’ ಎಂದು ಬಾಬರ್ ಆಝಮ್ ಹೇಳಿದ್ದಾರೆ.

ಅವರ ಬ್ಯಾಟಿಂಗ್ ಶೈಲಿಯನ್ನು ನೋಡಲು ತುಂಬಾ ಸಂತೋಷವಾಗುತ್ತದೆ. ಅಲ್ಲದೆ ಅವರು ತಂಡವು ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದ್ದಾಗ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ತಂಡವನ್ನು ಪಾರು ಮಾಡುವ ಗುಣವು ನನಗೆ ತುಂಬಾ ಇಷ್ಟವಾಗಿದೆ’ ಎಂದು ಪಾಕ್ ನಾಯಕ ತಿಳಿಸಿದ್ದಾರೆ.

`ಪಂದ್ಯದಲ್ಲಿ ಬೌಲರ್‍ಗಳು ಉತ್ತಮ ಬೌಲಿಂಗ್ ಪ್ರದರ್ಶನ ತೋರುತ್ತಿರುವ ಸಂದರ್ಭದಲ್ಲಿ ಒಬ್ಬ ಬ್ಯಾಟ್ಸ್‍ಮನ್‍ಗೆ ರನ್ ಗಳಿಸಲು ತುಂಬಾ ಕಷ್ಟದ ಸಂಗತಿಯಾಗಿರುತ್ತದೆ. ಆದರೆ ಅವರು (ರೋಹಿತ್, ಕೊಹ್ಲಿ ಹಾಗೂ ಕೇನ್ ವಿಲಿಯಮ್ಸನ್) ಇಂತಹ ಸಂದರ್ಭದಲ್ಲಿ ತಮ್ಮ ನೈಜ ಆಟದಿಂದ ಪಾರು ಮಾಡುವ ರೀತಿಯು ನನಗೆ ತುಂಬಾ ಇಷ್ಟವಾಗಿದೆ. ಆದ್ದರಿಂದಲೇ ಅವರು ನನ್ನ ಪ್ರಕಾರ ವಿಶ್ವದ ಅತ್ಯುತ್ತಮ ಆಟಗಾರರಾಗಿದ್ದಾರೆ’ ಎಂದು ಬಾಬರ್ ಆಝಮ್ ಹೇಳಿದ್ದಾರೆ.

andolanait

Recent Posts

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

15 mins ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

43 mins ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

1 hour ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

1 hour ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

1 hour ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

2 hours ago