ಕ್ರೀಡೆ

ರೋಹಿತ್-ಕೊಹ್ಲಿ ವಿಶ್ವಶ್ರೇಷ್ಠ ಆಟಗಾರರು: ಬಾಬರ್ ಆಝಮ್

ಬೆಂಗಳೂರು : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರರು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಮ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ಸ್ಟಾರ್ ಸ್ಪೋಟ್ರ್ಸ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ ಬಲಗೈ ಬ್ಯಾಟರ್ ಗೆ ವಿಶ್ವದ ನಿಮ್ಮ ಅತ್ಯುತ್ತಮ ಕ್ರಿಕೆಟಿಗರ ಹೆಸರನ್ನು ತಿಳಿಸಿ ಎಂದು ಕೇಳಿದಾಗ, ಬಾಬರ್ ಆಝಮ್, ರೋಹಿತ್ ಶರ್ಮಾ , ವಿರಾಟ್ ಕೊಹ್ಲಿ ಹಾಗೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

ನಾನು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೇನ್ ವಿಲಿಯಮ್ಸ್ ಅವರ ಹೆಸರ ತೆಗೆದುಕೊಳ್ಳಲು ಬಯಸುತ್ತೇನೆ. ಏಕೆಂದರೆ ನಾನು ಅವರ ಆಟವನ್ನು ಅನುಕರಿಸುತ್ತೇನೆ. ಅವರು ವಿಶ್ವದ ಅತ್ಯಂತ ಪರಿಣಾಮಕಾರಿ ಆಟಗಾರರಾಗಿದ್ದಾರೆ. ಅಲ್ಲದೆ ವಿಶ್ವದ ಅತಿ ಶ್ರೇಷ್ಠ ಬ್ಯಾಟರ್ಸ್‍ಗಳಾಗಿದ್ದಾರೆ. ಅವರು ಪಂದ್ಯದ ಸಂಕಷ್ಟದ ಪರಿಸ್ಥಿತಿಯನ್ನು ತುಂಬಾ ಸೂಕ್ಷ್ಮವಾಗಿ ಅದರಿಂದ ಹೇಗೆ ಹೊರಬರಬೇಕೆಂಬುದನ್ನು ತುಂಬಾ ಚೆನ್ನಾಗಿ ಅರಿತುಕೊಂಡಿದ್ದಾರೆ. ಆದ್ದರಿಂದಲೇ ಅವರು ವಿಶ್ವದ ಉತ್ತಮ ಆಟಗಾರರಾಗಿದ್ದಾರೆ’ ಎಂದು ಬಾಬರ್ ಆಝಮ್ ಹೇಳಿದ್ದಾರೆ.

ಅವರ ಬ್ಯಾಟಿಂಗ್ ಶೈಲಿಯನ್ನು ನೋಡಲು ತುಂಬಾ ಸಂತೋಷವಾಗುತ್ತದೆ. ಅಲ್ಲದೆ ಅವರು ತಂಡವು ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದ್ದಾಗ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ತಂಡವನ್ನು ಪಾರು ಮಾಡುವ ಗುಣವು ನನಗೆ ತುಂಬಾ ಇಷ್ಟವಾಗಿದೆ’ ಎಂದು ಪಾಕ್ ನಾಯಕ ತಿಳಿಸಿದ್ದಾರೆ.

`ಪಂದ್ಯದಲ್ಲಿ ಬೌಲರ್‍ಗಳು ಉತ್ತಮ ಬೌಲಿಂಗ್ ಪ್ರದರ್ಶನ ತೋರುತ್ತಿರುವ ಸಂದರ್ಭದಲ್ಲಿ ಒಬ್ಬ ಬ್ಯಾಟ್ಸ್‍ಮನ್‍ಗೆ ರನ್ ಗಳಿಸಲು ತುಂಬಾ ಕಷ್ಟದ ಸಂಗತಿಯಾಗಿರುತ್ತದೆ. ಆದರೆ ಅವರು (ರೋಹಿತ್, ಕೊಹ್ಲಿ ಹಾಗೂ ಕೇನ್ ವಿಲಿಯಮ್ಸನ್) ಇಂತಹ ಸಂದರ್ಭದಲ್ಲಿ ತಮ್ಮ ನೈಜ ಆಟದಿಂದ ಪಾರು ಮಾಡುವ ರೀತಿಯು ನನಗೆ ತುಂಬಾ ಇಷ್ಟವಾಗಿದೆ. ಆದ್ದರಿಂದಲೇ ಅವರು ನನ್ನ ಪ್ರಕಾರ ವಿಶ್ವದ ಅತ್ಯುತ್ತಮ ಆಟಗಾರರಾಗಿದ್ದಾರೆ’ ಎಂದು ಬಾಬರ್ ಆಝಮ್ ಹೇಳಿದ್ದಾರೆ.

andolanait

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

3 hours ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

3 hours ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

4 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

4 hours ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

4 hours ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

13 hours ago