ಕ್ರೀಡೆ

ರೋಹಿತ್-ಕೊಹ್ಲಿ ವಿಶ್ವಶ್ರೇಷ್ಠ ಆಟಗಾರರು: ಬಾಬರ್ ಆಝಮ್

ಬೆಂಗಳೂರು : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರರು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಮ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ಸ್ಟಾರ್ ಸ್ಪೋಟ್ರ್ಸ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ ಬಲಗೈ ಬ್ಯಾಟರ್ ಗೆ ವಿಶ್ವದ ನಿಮ್ಮ ಅತ್ಯುತ್ತಮ ಕ್ರಿಕೆಟಿಗರ ಹೆಸರನ್ನು ತಿಳಿಸಿ ಎಂದು ಕೇಳಿದಾಗ, ಬಾಬರ್ ಆಝಮ್, ರೋಹಿತ್ ಶರ್ಮಾ , ವಿರಾಟ್ ಕೊಹ್ಲಿ ಹಾಗೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

ನಾನು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೇನ್ ವಿಲಿಯಮ್ಸ್ ಅವರ ಹೆಸರ ತೆಗೆದುಕೊಳ್ಳಲು ಬಯಸುತ್ತೇನೆ. ಏಕೆಂದರೆ ನಾನು ಅವರ ಆಟವನ್ನು ಅನುಕರಿಸುತ್ತೇನೆ. ಅವರು ವಿಶ್ವದ ಅತ್ಯಂತ ಪರಿಣಾಮಕಾರಿ ಆಟಗಾರರಾಗಿದ್ದಾರೆ. ಅಲ್ಲದೆ ವಿಶ್ವದ ಅತಿ ಶ್ರೇಷ್ಠ ಬ್ಯಾಟರ್ಸ್‍ಗಳಾಗಿದ್ದಾರೆ. ಅವರು ಪಂದ್ಯದ ಸಂಕಷ್ಟದ ಪರಿಸ್ಥಿತಿಯನ್ನು ತುಂಬಾ ಸೂಕ್ಷ್ಮವಾಗಿ ಅದರಿಂದ ಹೇಗೆ ಹೊರಬರಬೇಕೆಂಬುದನ್ನು ತುಂಬಾ ಚೆನ್ನಾಗಿ ಅರಿತುಕೊಂಡಿದ್ದಾರೆ. ಆದ್ದರಿಂದಲೇ ಅವರು ವಿಶ್ವದ ಉತ್ತಮ ಆಟಗಾರರಾಗಿದ್ದಾರೆ’ ಎಂದು ಬಾಬರ್ ಆಝಮ್ ಹೇಳಿದ್ದಾರೆ.

ಅವರ ಬ್ಯಾಟಿಂಗ್ ಶೈಲಿಯನ್ನು ನೋಡಲು ತುಂಬಾ ಸಂತೋಷವಾಗುತ್ತದೆ. ಅಲ್ಲದೆ ಅವರು ತಂಡವು ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದ್ದಾಗ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ತಂಡವನ್ನು ಪಾರು ಮಾಡುವ ಗುಣವು ನನಗೆ ತುಂಬಾ ಇಷ್ಟವಾಗಿದೆ’ ಎಂದು ಪಾಕ್ ನಾಯಕ ತಿಳಿಸಿದ್ದಾರೆ.

`ಪಂದ್ಯದಲ್ಲಿ ಬೌಲರ್‍ಗಳು ಉತ್ತಮ ಬೌಲಿಂಗ್ ಪ್ರದರ್ಶನ ತೋರುತ್ತಿರುವ ಸಂದರ್ಭದಲ್ಲಿ ಒಬ್ಬ ಬ್ಯಾಟ್ಸ್‍ಮನ್‍ಗೆ ರನ್ ಗಳಿಸಲು ತುಂಬಾ ಕಷ್ಟದ ಸಂಗತಿಯಾಗಿರುತ್ತದೆ. ಆದರೆ ಅವರು (ರೋಹಿತ್, ಕೊಹ್ಲಿ ಹಾಗೂ ಕೇನ್ ವಿಲಿಯಮ್ಸನ್) ಇಂತಹ ಸಂದರ್ಭದಲ್ಲಿ ತಮ್ಮ ನೈಜ ಆಟದಿಂದ ಪಾರು ಮಾಡುವ ರೀತಿಯು ನನಗೆ ತುಂಬಾ ಇಷ್ಟವಾಗಿದೆ. ಆದ್ದರಿಂದಲೇ ಅವರು ನನ್ನ ಪ್ರಕಾರ ವಿಶ್ವದ ಅತ್ಯುತ್ತಮ ಆಟಗಾರರಾಗಿದ್ದಾರೆ’ ಎಂದು ಬಾಬರ್ ಆಝಮ್ ಹೇಳಿದ್ದಾರೆ.

andolanait

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

2 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

2 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

2 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

11 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago