ಕ್ರೀಡೆ

ರೋಹಿತ್-ಕೊಹ್ಲಿ ವಿಶ್ವಶ್ರೇಷ್ಠ ಆಟಗಾರರು: ಬಾಬರ್ ಆಝಮ್

ಬೆಂಗಳೂರು : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರರು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಮ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ಸ್ಟಾರ್ ಸ್ಪೋಟ್ರ್ಸ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ ಬಲಗೈ ಬ್ಯಾಟರ್ ಗೆ ವಿಶ್ವದ ನಿಮ್ಮ ಅತ್ಯುತ್ತಮ ಕ್ರಿಕೆಟಿಗರ ಹೆಸರನ್ನು ತಿಳಿಸಿ ಎಂದು ಕೇಳಿದಾಗ, ಬಾಬರ್ ಆಝಮ್, ರೋಹಿತ್ ಶರ್ಮಾ , ವಿರಾಟ್ ಕೊಹ್ಲಿ ಹಾಗೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

ನಾನು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೇನ್ ವಿಲಿಯಮ್ಸ್ ಅವರ ಹೆಸರ ತೆಗೆದುಕೊಳ್ಳಲು ಬಯಸುತ್ತೇನೆ. ಏಕೆಂದರೆ ನಾನು ಅವರ ಆಟವನ್ನು ಅನುಕರಿಸುತ್ತೇನೆ. ಅವರು ವಿಶ್ವದ ಅತ್ಯಂತ ಪರಿಣಾಮಕಾರಿ ಆಟಗಾರರಾಗಿದ್ದಾರೆ. ಅಲ್ಲದೆ ವಿಶ್ವದ ಅತಿ ಶ್ರೇಷ್ಠ ಬ್ಯಾಟರ್ಸ್‍ಗಳಾಗಿದ್ದಾರೆ. ಅವರು ಪಂದ್ಯದ ಸಂಕಷ್ಟದ ಪರಿಸ್ಥಿತಿಯನ್ನು ತುಂಬಾ ಸೂಕ್ಷ್ಮವಾಗಿ ಅದರಿಂದ ಹೇಗೆ ಹೊರಬರಬೇಕೆಂಬುದನ್ನು ತುಂಬಾ ಚೆನ್ನಾಗಿ ಅರಿತುಕೊಂಡಿದ್ದಾರೆ. ಆದ್ದರಿಂದಲೇ ಅವರು ವಿಶ್ವದ ಉತ್ತಮ ಆಟಗಾರರಾಗಿದ್ದಾರೆ’ ಎಂದು ಬಾಬರ್ ಆಝಮ್ ಹೇಳಿದ್ದಾರೆ.

ಅವರ ಬ್ಯಾಟಿಂಗ್ ಶೈಲಿಯನ್ನು ನೋಡಲು ತುಂಬಾ ಸಂತೋಷವಾಗುತ್ತದೆ. ಅಲ್ಲದೆ ಅವರು ತಂಡವು ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದ್ದಾಗ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ತಂಡವನ್ನು ಪಾರು ಮಾಡುವ ಗುಣವು ನನಗೆ ತುಂಬಾ ಇಷ್ಟವಾಗಿದೆ’ ಎಂದು ಪಾಕ್ ನಾಯಕ ತಿಳಿಸಿದ್ದಾರೆ.

`ಪಂದ್ಯದಲ್ಲಿ ಬೌಲರ್‍ಗಳು ಉತ್ತಮ ಬೌಲಿಂಗ್ ಪ್ರದರ್ಶನ ತೋರುತ್ತಿರುವ ಸಂದರ್ಭದಲ್ಲಿ ಒಬ್ಬ ಬ್ಯಾಟ್ಸ್‍ಮನ್‍ಗೆ ರನ್ ಗಳಿಸಲು ತುಂಬಾ ಕಷ್ಟದ ಸಂಗತಿಯಾಗಿರುತ್ತದೆ. ಆದರೆ ಅವರು (ರೋಹಿತ್, ಕೊಹ್ಲಿ ಹಾಗೂ ಕೇನ್ ವಿಲಿಯಮ್ಸನ್) ಇಂತಹ ಸಂದರ್ಭದಲ್ಲಿ ತಮ್ಮ ನೈಜ ಆಟದಿಂದ ಪಾರು ಮಾಡುವ ರೀತಿಯು ನನಗೆ ತುಂಬಾ ಇಷ್ಟವಾಗಿದೆ. ಆದ್ದರಿಂದಲೇ ಅವರು ನನ್ನ ಪ್ರಕಾರ ವಿಶ್ವದ ಅತ್ಯುತ್ತಮ ಆಟಗಾರರಾಗಿದ್ದಾರೆ’ ಎಂದು ಬಾಬರ್ ಆಝಮ್ ಹೇಳಿದ್ದಾರೆ.

andolanait

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

42 mins ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

51 mins ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

2 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

2 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

2 hours ago