ಕ್ರೀಡೆ

ಈ ಸಾಧನೆ ಮಾಡಿದ ನಂತರ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತೇನೆ: ಹಿಟ್‌ಮ್ಯಾನ್‌

ಟೀಂ ಇಂಡಿಯಾ ಕಪ್ತಾನ್‌ ರೊಹಿತ್‌ ಶರ್ಮಾ ಅವರು ತಮ್ಮ ಕ್ರಿಕೆಟ್‌ ನಿವೃತ್ತಿಯ ಬಗ್ಗೆ ಮೌನ ಮುರಿದಿದ್ದಾರೆ. 2024ರ ಟಿ20 ವಿಶ್ವಕಪ್‌ ನಂತರ ರೋಹಿತ್‌ ಶರ್ಮಾ ಅವರು ನಿವೃತ್ತಿ ಹೊಂದಲಿದ್ದಾರೆ ಎಂದು ಎಲ್ಲರೂ ಊಹಿಸಿದ್ದರು. ಈ ಬಗ್ಗೆ ಸ್ವತಃ ಹಿಟ್‌ಮ್ಯಾನ್‌ ರೋಹಿತ್‌ ಮಾತನಾಡಿದ್ದಾರೆ.

2007 ರಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಚೊಚ್ಚಲ ಟಿ20 ವಿಶ್ವಕಪ್‌ ಗೆದ್ದು ಬೀಗಿತ್ತು. ಆಗ ಆ ತಂಡದಲ್ಲಿ ಭಾಗವಾಗಿದ್ದ ರೋಹಿತ್‌ ಶರ್ಮಾ, 2023 ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು. ಇದೀಗ ಇವರ ನಿವೃತ್ತಿ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದು ಖಾಸಗೀ ಸಂದರ್ಶನದಲ್ಲಿ ಮಾತನಾಡಿರುವ ಅವರು, ತಾವು ಆ ಸಾಧನೆ ಮಾಡಿದ ನಂತರ ನಿವೃತ್ತಿ ಹೊಂದುವುದಾಗಿ ಹೇಳಿದ್ದಾರೆ.

ತಮ್ಮ ನಿವೃತ್ತಿ ಬಗ್ಗೆ ಮಾತನಾಡುತ್ತಾ, ನನಗೆ ನಿಜವಾಗಿಯೂ ನಿವೃತ್ತಿಯ ಬಗ್ಗೆ ಚಿಂತನೆಗಳು ಬಂದಿಲ್ಲ ಹಾಗೆಯೇ ಎಲ್ಲಿಯವರೆಗೆ ಆಡುತ್ತೇನೆ ಎಂಬುದು ತಿಳಿದಿಲ್ಲ. ಈಗ ಉತ್ತಮ ಫಾರ್ಮ್‌ನಲ್ಲಿದ್ದು, ಮುಂದಿನ ಕೆಲವು ವರ್ಷಗಳು ಕ್ರಿಕೆಟ್‌ ಆಡುವುದನ್ನು ಮುಂದುವರೆಸುತ್ತೇನೆ ಮುಂದೆ ಏನಾಗತ್ತದೆ ಎಂಬುದು ನನಗೆ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಅವರು ಮುಂಬರುವ ಟಿ20 ವಿಶ್ವಕಪ್‌ ಹಾಗೂ 2027 ರಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಗೆಲ್ಲುವ ಬಯಕೆಯನ್ನು ಹೊಂದಿದ್ದಾರೆ. ನಾನು ವಿಶ್ವಕಪ್‌ ಅನ್ನು ನೋಡುತ್ತಾ ಬೆಳೆದಿದ್ದು ಅದನ್ನು ಗೆಲ್ಲಲ್ಲು ಪ್ರಯತ್ನಿಸುತ್ತೇವೆ ಎಂದಿರುವ ಅವರು. ತಮ್ಮ ಕ್ರಿಕೆಟ್‌ ವೃತ್ತಿಯಲ್ಲಿ 2025ರಲ್ಲಿ ಲಾರ್ಡ್ಸ್‌ ನಲ್ಲಿ ನಡೆಯಲಿರುವ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆಲ್ಲಲು ಬಯಸುತ್ತಿರುವುದಾಗಿ ಅವರು ಮುಕ್ತ ಕಂಠದಿಂದ ವಿವರಿಸಿದ್ದಾರೆ. ಇದರೊಂದಿಗೆ ಅವರು 2027ರ ವಿಶ್ವಕಪ್‌ ವರೆಗೂ ತಮ್ಮ ಆಟ ಆಡಲಿದ್ದು, ಸದ್ಯಕ್ಕೆ ನಿವೃತ್ತಿ ಹೊಂದುತ್ತಾರೆ ಎಂಬ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.

ಇದರೊಂದಿಗೆ ವಿಶ್ವಕಪ್‌ ಸೋಲಿನ ಬಗ್ಗೆಯೂ ಮಾತನಾಡಿರುವ ರೋಹಿತ್‌, ಹೋಮ್‌ ಗ್ರೌಂಡ್‌ನಲ್ಲಿಯೇ ವಿಶ್ವಕಪ್‌ ಸೋತಿದ್ದು ದುರಂತ. ನಾವು ವಿಶ್ವಕಪ್‌ ನೋಡಿಯೇ ಬೆಳೆದವರು. ಆ ಟೂರ್ನಿಯುದ್ದಕ್ಕೂ ಉತ್ತಮವಾಗಿಯೇ ಆಡಿದ್ದೆವು. ನಮಗೂ ವಿಶ್ವಕಪ್‌ನಲ್ಲಿ ಕೆಟ್ಟ ದಿನ ಬರಲಿದೆ ಎಂದು ಭಾವಿಸಿದ್ದೇವು. ಅದರೇ ನಮ್ಮ ದುರಾದೃಷ್ಟಕ್ಕೆ ಅದು ಫೈನಲ್‌ ದಿನವೇ ಆಗಿತ್ತು. ನಮ್ಮ ಆಟ ನಿರೀಕ್ಷೆಗೆ ತಕ್ಕಂತೆ ಇರಲಿಲ್ಲ. ಆಸ್ಟ್ರೇಲಿಯಾ ನಮಗಿಂತ ಉತ್ತಮವಾದ ಆಟ ಪ್ರದರ್ಶಿಸಿ ವಿಶ್ವಕಪ್‌ ಗೆದ್ದರು ಎಂದು ಬೇಸರ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

7 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

7 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

8 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

9 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

9 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

9 hours ago