ಕ್ರೀಡೆ

ಇದು ಒಂದು ಅನುಭವ: ಪಾಂಡ್ಯ ನಾಯಕತ್ವದ ಬಗ್ಗೆ ಕೊನೆಗೂ ಮೌನ ಮುರಿದ ಹಿಟ್‌ಮ್ಯಾನ್‌!

ನವದೆಹಲಿ: ಐದು ಬಾರಿ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡದಲ್ಲಿನ ರೋಹಿತ್‌ ಶರ್ಮಾ ಅವರ ಸ್ಥಾನಮಾನ ಕುರಿತು ಸ್ವತಃ ಹಿಟ್‌ಮ್ಯಾನ್‌ ಮನಬಿಚ್ಚಿ ಮಾತನಾಡಿದ್ದಾರೆ.

ಈ ಬಾರಿಯ ಐಪಿಎಲ್‌ ಸೀಸನ್‌ಗೆ ಮುಂಬೈ ತಂಡ ನೂತನ ಸಾರಥಿಯನ್ನು ನೇಮಕ ಮಾಡಿತ್ತು. ರೋಹಿತ್‌ ಶರ್ಮಾ ಉಪಸ್ಥಿತಿಯಲ್ಲಿಯೂ ಕೂಡಾ ಹಾರ್ದಿಕ್‌ ಪಾಂಡ್ಯ ಅವರನ್ನು ನಾಯಕನಾಗಿ ಎಂಐ ನೇಮಿಸಿದ ಬೆನ್ನಲ್ಲೇ ರೋಹಿತ್‌ ಅವರ ಅಪಾರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು.

ಇನ್ನು ರೋಹಿತ್‌ ಅವರಿಂದ ಯಾವುದೇ ಇನ್‌ಪುಟ್‌ ಪಡೆಯದೇ ಹಾರ್ದಿಕ್‌ ಅವರನ್ನು ನಾಯಕನನ್ನಾಗಿ ಮಾಡಿದ್ದಾರೆ ಎಂದು ಹಲವರು ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದರು. ಈ ಎಲ್ಲದರ ಬಗ್ಗೆ ಟೀಮ್‌ ಇಂಡಿಯಾ ಕಪ್ತಾನ್‌ ತಮ್ಮ ಮೌನ ಮುರಿದು ಮೊದಲ ಬಾರಿಗೆ ಮಾತನಾಡಿದ್ದಾರೆ.

ಈ ಐಪಿಎಲ್‌ನಲ್ಲಿ ಹಾರ್ದಿಕ್‌ ನಾಯಕತ್ವದಡಿಯಲ್ಲಿ ಆಡುತ್ತಿರುವ ಅನುಭವದ ಬಗ್ಗೆ ಕೇಳಿದ ಪ್ರಶ್ನೆಗೆ “ಬೇರೆ ಕ್ಯಾಪ್ಟನ್‌ಗಳ ಅಡಿಯಲ್ಲಿ ಆಡುವುದು ನನಗೆ ಹೊಸದೇನಲ್ಲ. ಇವೆಲ್ಲವೂ ಜೀವನದ ಒಂದು ಭಾಗ, ನಾವು ಅಂದುಕೊಂಡಂತೆ ಏನು ನಡೆಯುವುದಿಲ್ಲ” ಎಂದು ಮಾಜಿ ನಾಯಕ ರೋಹಿತ್‌ ಶರ್ಮಾ ಅವರು ವಿವರಿಸಿದ್ದಾರೆ.

ಈ ಮೊದಲು ನಾನು ನಾಯಕನಾಗಿರಲಿಲ್ಲ. ಆವಾಗ ಹಲವಾರು ನಾಯಕರ ಅಡಿಯಲ್ಲಿ ನಾನು ಆಟವಾಡಿದ್ದೇನೆ. ಇದು ನನಗೆ ಭಿನ್ನವೂ ಅಲ್ಲ, ಹೊಸದು ಅಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಈ ಎಲ್ಲದರ ನಡುವೆ ರೋಹಿತ್‌ ಶರ್ಮಾ ಅವರು ಹಾರ್ದಿಕ್‌ ಪಾಂಡ್ಯ ಅವರ ಮೇಲೆ ಯಾವುದೇ ಬೇಸರವನ್ನು ಸಹಾ ವ್ಯಕ್ತಪಡಿಸಿಲ್ಲ ಎಂಬುದು ಗಮನಾರ್ಹ ಸಂಗತಿ..

ಈ ಹಿಂದೆ ಟೀಂ ಇಂಡಿಯಾ ಪರವಾಗಿ ಆಡುವಾಗ ಎಂ.ಎಸ್‌ ಧೋನಿ, ವಿರೇಂದ್ರ ಸೆಹ್ವಾಗ್‌ ಹಾಗೂ ವಿರಾಟ್‌ ಕೊಹ್ಲಿ ಅವರ ನಾಯಕತ್ವದಲ್ಲಿ ಪ್ರತಿನಿಧಿಸಿದ್ದರು. ಇನ್ನು ಐಪಿಎಲ್‌ನಲ್ಲಿ ಆಡಂ ಗಿಲ್‌ಕ್ರಿಸ್ಟ್‌, ಹರಭಜನ್‌ ಸಿಂಗ್‌, ರಿಕ್ಕಿ ಪಾಂಟಿಂಗ್‌ ಅವರ ಗರಡಿಯಲ್ಲಿ ರೋಹಿತ್‌ ಆಟವಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

6 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

9 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

9 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

9 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

10 hours ago