ಕ್ರೀಡೆ

ಇದು ಒಂದು ಅನುಭವ: ಪಾಂಡ್ಯ ನಾಯಕತ್ವದ ಬಗ್ಗೆ ಕೊನೆಗೂ ಮೌನ ಮುರಿದ ಹಿಟ್‌ಮ್ಯಾನ್‌!

ನವದೆಹಲಿ: ಐದು ಬಾರಿ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡದಲ್ಲಿನ ರೋಹಿತ್‌ ಶರ್ಮಾ ಅವರ ಸ್ಥಾನಮಾನ ಕುರಿತು ಸ್ವತಃ ಹಿಟ್‌ಮ್ಯಾನ್‌ ಮನಬಿಚ್ಚಿ ಮಾತನಾಡಿದ್ದಾರೆ.

ಈ ಬಾರಿಯ ಐಪಿಎಲ್‌ ಸೀಸನ್‌ಗೆ ಮುಂಬೈ ತಂಡ ನೂತನ ಸಾರಥಿಯನ್ನು ನೇಮಕ ಮಾಡಿತ್ತು. ರೋಹಿತ್‌ ಶರ್ಮಾ ಉಪಸ್ಥಿತಿಯಲ್ಲಿಯೂ ಕೂಡಾ ಹಾರ್ದಿಕ್‌ ಪಾಂಡ್ಯ ಅವರನ್ನು ನಾಯಕನಾಗಿ ಎಂಐ ನೇಮಿಸಿದ ಬೆನ್ನಲ್ಲೇ ರೋಹಿತ್‌ ಅವರ ಅಪಾರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು.

ಇನ್ನು ರೋಹಿತ್‌ ಅವರಿಂದ ಯಾವುದೇ ಇನ್‌ಪುಟ್‌ ಪಡೆಯದೇ ಹಾರ್ದಿಕ್‌ ಅವರನ್ನು ನಾಯಕನನ್ನಾಗಿ ಮಾಡಿದ್ದಾರೆ ಎಂದು ಹಲವರು ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದರು. ಈ ಎಲ್ಲದರ ಬಗ್ಗೆ ಟೀಮ್‌ ಇಂಡಿಯಾ ಕಪ್ತಾನ್‌ ತಮ್ಮ ಮೌನ ಮುರಿದು ಮೊದಲ ಬಾರಿಗೆ ಮಾತನಾಡಿದ್ದಾರೆ.

ಈ ಐಪಿಎಲ್‌ನಲ್ಲಿ ಹಾರ್ದಿಕ್‌ ನಾಯಕತ್ವದಡಿಯಲ್ಲಿ ಆಡುತ್ತಿರುವ ಅನುಭವದ ಬಗ್ಗೆ ಕೇಳಿದ ಪ್ರಶ್ನೆಗೆ “ಬೇರೆ ಕ್ಯಾಪ್ಟನ್‌ಗಳ ಅಡಿಯಲ್ಲಿ ಆಡುವುದು ನನಗೆ ಹೊಸದೇನಲ್ಲ. ಇವೆಲ್ಲವೂ ಜೀವನದ ಒಂದು ಭಾಗ, ನಾವು ಅಂದುಕೊಂಡಂತೆ ಏನು ನಡೆಯುವುದಿಲ್ಲ” ಎಂದು ಮಾಜಿ ನಾಯಕ ರೋಹಿತ್‌ ಶರ್ಮಾ ಅವರು ವಿವರಿಸಿದ್ದಾರೆ.

ಈ ಮೊದಲು ನಾನು ನಾಯಕನಾಗಿರಲಿಲ್ಲ. ಆವಾಗ ಹಲವಾರು ನಾಯಕರ ಅಡಿಯಲ್ಲಿ ನಾನು ಆಟವಾಡಿದ್ದೇನೆ. ಇದು ನನಗೆ ಭಿನ್ನವೂ ಅಲ್ಲ, ಹೊಸದು ಅಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಈ ಎಲ್ಲದರ ನಡುವೆ ರೋಹಿತ್‌ ಶರ್ಮಾ ಅವರು ಹಾರ್ದಿಕ್‌ ಪಾಂಡ್ಯ ಅವರ ಮೇಲೆ ಯಾವುದೇ ಬೇಸರವನ್ನು ಸಹಾ ವ್ಯಕ್ತಪಡಿಸಿಲ್ಲ ಎಂಬುದು ಗಮನಾರ್ಹ ಸಂಗತಿ..

ಈ ಹಿಂದೆ ಟೀಂ ಇಂಡಿಯಾ ಪರವಾಗಿ ಆಡುವಾಗ ಎಂ.ಎಸ್‌ ಧೋನಿ, ವಿರೇಂದ್ರ ಸೆಹ್ವಾಗ್‌ ಹಾಗೂ ವಿರಾಟ್‌ ಕೊಹ್ಲಿ ಅವರ ನಾಯಕತ್ವದಲ್ಲಿ ಪ್ರತಿನಿಧಿಸಿದ್ದರು. ಇನ್ನು ಐಪಿಎಲ್‌ನಲ್ಲಿ ಆಡಂ ಗಿಲ್‌ಕ್ರಿಸ್ಟ್‌, ಹರಭಜನ್‌ ಸಿಂಗ್‌, ರಿಕ್ಕಿ ಪಾಂಟಿಂಗ್‌ ಅವರ ಗರಡಿಯಲ್ಲಿ ರೋಹಿತ್‌ ಆಟವಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

36 mins ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

38 mins ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

50 mins ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

54 mins ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

57 mins ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

59 mins ago