ಕ್ರೀಡೆ

ಇದು ಒಂದು ಅನುಭವ: ಪಾಂಡ್ಯ ನಾಯಕತ್ವದ ಬಗ್ಗೆ ಕೊನೆಗೂ ಮೌನ ಮುರಿದ ಹಿಟ್‌ಮ್ಯಾನ್‌!

ನವದೆಹಲಿ: ಐದು ಬಾರಿ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡದಲ್ಲಿನ ರೋಹಿತ್‌ ಶರ್ಮಾ ಅವರ ಸ್ಥಾನಮಾನ ಕುರಿತು ಸ್ವತಃ ಹಿಟ್‌ಮ್ಯಾನ್‌ ಮನಬಿಚ್ಚಿ ಮಾತನಾಡಿದ್ದಾರೆ.

ಈ ಬಾರಿಯ ಐಪಿಎಲ್‌ ಸೀಸನ್‌ಗೆ ಮುಂಬೈ ತಂಡ ನೂತನ ಸಾರಥಿಯನ್ನು ನೇಮಕ ಮಾಡಿತ್ತು. ರೋಹಿತ್‌ ಶರ್ಮಾ ಉಪಸ್ಥಿತಿಯಲ್ಲಿಯೂ ಕೂಡಾ ಹಾರ್ದಿಕ್‌ ಪಾಂಡ್ಯ ಅವರನ್ನು ನಾಯಕನಾಗಿ ಎಂಐ ನೇಮಿಸಿದ ಬೆನ್ನಲ್ಲೇ ರೋಹಿತ್‌ ಅವರ ಅಪಾರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು.

ಇನ್ನು ರೋಹಿತ್‌ ಅವರಿಂದ ಯಾವುದೇ ಇನ್‌ಪುಟ್‌ ಪಡೆಯದೇ ಹಾರ್ದಿಕ್‌ ಅವರನ್ನು ನಾಯಕನನ್ನಾಗಿ ಮಾಡಿದ್ದಾರೆ ಎಂದು ಹಲವರು ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದರು. ಈ ಎಲ್ಲದರ ಬಗ್ಗೆ ಟೀಮ್‌ ಇಂಡಿಯಾ ಕಪ್ತಾನ್‌ ತಮ್ಮ ಮೌನ ಮುರಿದು ಮೊದಲ ಬಾರಿಗೆ ಮಾತನಾಡಿದ್ದಾರೆ.

ಈ ಐಪಿಎಲ್‌ನಲ್ಲಿ ಹಾರ್ದಿಕ್‌ ನಾಯಕತ್ವದಡಿಯಲ್ಲಿ ಆಡುತ್ತಿರುವ ಅನುಭವದ ಬಗ್ಗೆ ಕೇಳಿದ ಪ್ರಶ್ನೆಗೆ “ಬೇರೆ ಕ್ಯಾಪ್ಟನ್‌ಗಳ ಅಡಿಯಲ್ಲಿ ಆಡುವುದು ನನಗೆ ಹೊಸದೇನಲ್ಲ. ಇವೆಲ್ಲವೂ ಜೀವನದ ಒಂದು ಭಾಗ, ನಾವು ಅಂದುಕೊಂಡಂತೆ ಏನು ನಡೆಯುವುದಿಲ್ಲ” ಎಂದು ಮಾಜಿ ನಾಯಕ ರೋಹಿತ್‌ ಶರ್ಮಾ ಅವರು ವಿವರಿಸಿದ್ದಾರೆ.

ಈ ಮೊದಲು ನಾನು ನಾಯಕನಾಗಿರಲಿಲ್ಲ. ಆವಾಗ ಹಲವಾರು ನಾಯಕರ ಅಡಿಯಲ್ಲಿ ನಾನು ಆಟವಾಡಿದ್ದೇನೆ. ಇದು ನನಗೆ ಭಿನ್ನವೂ ಅಲ್ಲ, ಹೊಸದು ಅಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಈ ಎಲ್ಲದರ ನಡುವೆ ರೋಹಿತ್‌ ಶರ್ಮಾ ಅವರು ಹಾರ್ದಿಕ್‌ ಪಾಂಡ್ಯ ಅವರ ಮೇಲೆ ಯಾವುದೇ ಬೇಸರವನ್ನು ಸಹಾ ವ್ಯಕ್ತಪಡಿಸಿಲ್ಲ ಎಂಬುದು ಗಮನಾರ್ಹ ಸಂಗತಿ..

ಈ ಹಿಂದೆ ಟೀಂ ಇಂಡಿಯಾ ಪರವಾಗಿ ಆಡುವಾಗ ಎಂ.ಎಸ್‌ ಧೋನಿ, ವಿರೇಂದ್ರ ಸೆಹ್ವಾಗ್‌ ಹಾಗೂ ವಿರಾಟ್‌ ಕೊಹ್ಲಿ ಅವರ ನಾಯಕತ್ವದಲ್ಲಿ ಪ್ರತಿನಿಧಿಸಿದ್ದರು. ಇನ್ನು ಐಪಿಎಲ್‌ನಲ್ಲಿ ಆಡಂ ಗಿಲ್‌ಕ್ರಿಸ್ಟ್‌, ಹರಭಜನ್‌ ಸಿಂಗ್‌, ರಿಕ್ಕಿ ಪಾಂಟಿಂಗ್‌ ಅವರ ಗರಡಿಯಲ್ಲಿ ರೋಹಿತ್‌ ಆಟವಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

2 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

3 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

3 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

4 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

20 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

22 hours ago