ಕ್ರೀಡೆ

ರೋಹಿತ್ ಶರ್ಮಾ ಒನ್ ಮ್ಯಾನ್ ಆರ್ಮಿ: ಶೋಯಬ್‌ ಅಖ್ತರ್ ಬಣ್ಣನೆ

ಅಹಮದಾಬಾದ್ : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿಯಂತೆ ಪಾಕಿಸ್ತಾನ ಬೌಲರ್‌ಗಳ ಬಲವನ್ನು ಧ್ವಂಸಗೊಳಿಸಿದ್ದಾರೆ ಎಂದು ರಾವಲ್ಪಿಂಡಿ ಎಕ್ಸ್‍ಪ್ರೆಸ್ ಶೋಯೆಬ್ ಅಖ್ತರ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.

ಟೀಮ್ ಇಂಡಿಯಾದ 7 ವಿಕೆಟ್‍ಗಳ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಹಿಟ್ ಮ್ಯಾನ್, 63 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ ನೆರವಿನಿಂದ 86 ರನ್ ಬಾರಿಸಿದ್ದರು. ಒಡಿಐ ಸ್ವರೂಪದಲ್ಲಿ 300 ಸಿಕ್ಸರ್ ಪೂರೈಸಿದ ರೋಹಿತ್ ಶರ್ಮಾ, 2023ನೇ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ 217 ರನ್ ಗಳಿಸುವ ಮೂಲಕ ಗರಿಷ್ಠ 3ನೇ ಸ್ಕೋರರ್ ಆಗಿದ್ದಾರೆ.

ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಬೌಲರ್‌ಗಳ ಪ್ರದರ್ಶನವು ತುಂಬಾ ಬೇಸರ ತರಿಸಿದೆ. ಭಾರತ ತಂಡವು ಪಾಕಿಸ್ತಾನ ವಿರುದ್ಧ ಎಲ್ಲ ವಿಭಾಗಗಳಲ್ಲೂ ಮೇಲುಗೈ ಸಾಧಿಸಿತ್ತು. ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿ ರೀತಿ ಕಂಗೊಳಿಸಿದರು. ಕಳೆದ ಕೆಲವು ವರ್ಷಗಳಿಂದ ರೋಹಿತ್ ಶರ್ಮಾ ಅವರು ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಎಲ್ಲಿ ಅಡಗಿಸಿಟ್ಟಿದ್ದರು. ಆತ ನಿಜಕ್ಕೂ ವಿಶ್ವಶ್ರೇಷ್ಠ ಆಟಗಾರ, ಕ್ರೀಡಾಂಗಣದ ಎಲ್ಲ ಮೂಲೆಗೂ ಚೆಂಡನ್ನು ಅಟ್ಟುವ ಸಾಮಥ್ರ್ಯ ಹೊಂದಿದ್ದಾರೆ. ಅವನೊಬ್ಬ ಸಂಪೂರ್ಣ ಆಟಗಾರನಾಗಿದ್ದು, ಒಂದು ಸದೃಢ ತಂಡವಾಗಿದೆ’ ಎಂದು ಅಖ್ತರ್ ಗುಣಗಾಣ ಮಾಡಿದ್ದಾರೆ.

ರೋಹಿತ್ ಶರ್ಮಾ ಅವರು ತಮ್ಮ ಸ್ಪೋಟಕ ಬ್ಯಾಟಿಂಗ್‍ನಿಂದ ಪಾಕಿಸ್ತಾನದ ಬೌಲಿಂಗ್ ಪಡೆಯನ್ನು ಧ್ವಂಸಗೊಳಿಸಿದ್ದಾರೆ. ಹಿಟ್‍ಮ್ಯಾನ್ ಮತ್ತೆ ಸ್ಪೋಟಕ ಲಯಕ್ಕೆ ಮರಳಿರುವುದನ್ನು ನೋಡಲು ತುಂಬಾ ಸಂತಸವಾಗುತ್ತಿದೆ. ಅವನು ಬೌಲರ್‍ಗಳನ್ನು ದಂಡಿಸುವ ಶಕ್ತಿಯನ್ನು ಹೊಂದಿದ್ದಾನೆ. ಆಟವನ್ನು ತಮ್ಮದೇ ಆದ ಶೈಲಿಯಲ್ಲಿ ಮುಗಿಸುತ್ತಾರೆ. ಅದರಲ್ಲೂ ಪಂದ್ಯದ ಕೊನೆಯ ಓವರ್‍ಗಳಲ್ಲಿ ಬೌಲರ್‍ಗಳನ್ನು ಅವಮಾನಿಸುವ ರೀತಿಯಲ್ಲಿ ಬ್ಯಾಟ್ ಬೀಸುತ್ತಾರೆ’ ಎಂದು ಅಖ್ತರ್ ತಿಳಿಸಿದ್ದಾರೆ.

andolanait

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

47 mins ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

49 mins ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

53 mins ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

1 hour ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

2 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 hours ago