ಕ್ರೀಡೆ

ರೋಹಿತ್ ಶರ್ಮಾ ಒನ್ ಮ್ಯಾನ್ ಆರ್ಮಿ: ಶೋಯಬ್‌ ಅಖ್ತರ್ ಬಣ್ಣನೆ

ಅಹಮದಾಬಾದ್ : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿಯಂತೆ ಪಾಕಿಸ್ತಾನ ಬೌಲರ್‌ಗಳ ಬಲವನ್ನು ಧ್ವಂಸಗೊಳಿಸಿದ್ದಾರೆ ಎಂದು ರಾವಲ್ಪಿಂಡಿ ಎಕ್ಸ್‍ಪ್ರೆಸ್ ಶೋಯೆಬ್ ಅಖ್ತರ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.

ಟೀಮ್ ಇಂಡಿಯಾದ 7 ವಿಕೆಟ್‍ಗಳ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಹಿಟ್ ಮ್ಯಾನ್, 63 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ ನೆರವಿನಿಂದ 86 ರನ್ ಬಾರಿಸಿದ್ದರು. ಒಡಿಐ ಸ್ವರೂಪದಲ್ಲಿ 300 ಸಿಕ್ಸರ್ ಪೂರೈಸಿದ ರೋಹಿತ್ ಶರ್ಮಾ, 2023ನೇ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ 217 ರನ್ ಗಳಿಸುವ ಮೂಲಕ ಗರಿಷ್ಠ 3ನೇ ಸ್ಕೋರರ್ ಆಗಿದ್ದಾರೆ.

ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಬೌಲರ್‌ಗಳ ಪ್ರದರ್ಶನವು ತುಂಬಾ ಬೇಸರ ತರಿಸಿದೆ. ಭಾರತ ತಂಡವು ಪಾಕಿಸ್ತಾನ ವಿರುದ್ಧ ಎಲ್ಲ ವಿಭಾಗಗಳಲ್ಲೂ ಮೇಲುಗೈ ಸಾಧಿಸಿತ್ತು. ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿ ರೀತಿ ಕಂಗೊಳಿಸಿದರು. ಕಳೆದ ಕೆಲವು ವರ್ಷಗಳಿಂದ ರೋಹಿತ್ ಶರ್ಮಾ ಅವರು ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಎಲ್ಲಿ ಅಡಗಿಸಿಟ್ಟಿದ್ದರು. ಆತ ನಿಜಕ್ಕೂ ವಿಶ್ವಶ್ರೇಷ್ಠ ಆಟಗಾರ, ಕ್ರೀಡಾಂಗಣದ ಎಲ್ಲ ಮೂಲೆಗೂ ಚೆಂಡನ್ನು ಅಟ್ಟುವ ಸಾಮಥ್ರ್ಯ ಹೊಂದಿದ್ದಾರೆ. ಅವನೊಬ್ಬ ಸಂಪೂರ್ಣ ಆಟಗಾರನಾಗಿದ್ದು, ಒಂದು ಸದೃಢ ತಂಡವಾಗಿದೆ’ ಎಂದು ಅಖ್ತರ್ ಗುಣಗಾಣ ಮಾಡಿದ್ದಾರೆ.

ರೋಹಿತ್ ಶರ್ಮಾ ಅವರು ತಮ್ಮ ಸ್ಪೋಟಕ ಬ್ಯಾಟಿಂಗ್‍ನಿಂದ ಪಾಕಿಸ್ತಾನದ ಬೌಲಿಂಗ್ ಪಡೆಯನ್ನು ಧ್ವಂಸಗೊಳಿಸಿದ್ದಾರೆ. ಹಿಟ್‍ಮ್ಯಾನ್ ಮತ್ತೆ ಸ್ಪೋಟಕ ಲಯಕ್ಕೆ ಮರಳಿರುವುದನ್ನು ನೋಡಲು ತುಂಬಾ ಸಂತಸವಾಗುತ್ತಿದೆ. ಅವನು ಬೌಲರ್‍ಗಳನ್ನು ದಂಡಿಸುವ ಶಕ್ತಿಯನ್ನು ಹೊಂದಿದ್ದಾನೆ. ಆಟವನ್ನು ತಮ್ಮದೇ ಆದ ಶೈಲಿಯಲ್ಲಿ ಮುಗಿಸುತ್ತಾರೆ. ಅದರಲ್ಲೂ ಪಂದ್ಯದ ಕೊನೆಯ ಓವರ್‍ಗಳಲ್ಲಿ ಬೌಲರ್‍ಗಳನ್ನು ಅವಮಾನಿಸುವ ರೀತಿಯಲ್ಲಿ ಬ್ಯಾಟ್ ಬೀಸುತ್ತಾರೆ’ ಎಂದು ಅಖ್ತರ್ ತಿಳಿಸಿದ್ದಾರೆ.

andolanait

Recent Posts

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…

6 mins ago

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

3 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

3 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

3 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

3 hours ago