ಕ್ರೀಡೆ

ರೋಹಿತ್ ಶರ್ಮಾ ಒನ್ ಮ್ಯಾನ್ ಆರ್ಮಿ: ಶೋಯಬ್‌ ಅಖ್ತರ್ ಬಣ್ಣನೆ

ಅಹಮದಾಬಾದ್ : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿಯಂತೆ ಪಾಕಿಸ್ತಾನ ಬೌಲರ್‌ಗಳ ಬಲವನ್ನು ಧ್ವಂಸಗೊಳಿಸಿದ್ದಾರೆ ಎಂದು ರಾವಲ್ಪಿಂಡಿ ಎಕ್ಸ್‍ಪ್ರೆಸ್ ಶೋಯೆಬ್ ಅಖ್ತರ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.

ಟೀಮ್ ಇಂಡಿಯಾದ 7 ವಿಕೆಟ್‍ಗಳ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಹಿಟ್ ಮ್ಯಾನ್, 63 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ ನೆರವಿನಿಂದ 86 ರನ್ ಬಾರಿಸಿದ್ದರು. ಒಡಿಐ ಸ್ವರೂಪದಲ್ಲಿ 300 ಸಿಕ್ಸರ್ ಪೂರೈಸಿದ ರೋಹಿತ್ ಶರ್ಮಾ, 2023ನೇ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ 217 ರನ್ ಗಳಿಸುವ ಮೂಲಕ ಗರಿಷ್ಠ 3ನೇ ಸ್ಕೋರರ್ ಆಗಿದ್ದಾರೆ.

ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಬೌಲರ್‌ಗಳ ಪ್ರದರ್ಶನವು ತುಂಬಾ ಬೇಸರ ತರಿಸಿದೆ. ಭಾರತ ತಂಡವು ಪಾಕಿಸ್ತಾನ ವಿರುದ್ಧ ಎಲ್ಲ ವಿಭಾಗಗಳಲ್ಲೂ ಮೇಲುಗೈ ಸಾಧಿಸಿತ್ತು. ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿ ರೀತಿ ಕಂಗೊಳಿಸಿದರು. ಕಳೆದ ಕೆಲವು ವರ್ಷಗಳಿಂದ ರೋಹಿತ್ ಶರ್ಮಾ ಅವರು ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಎಲ್ಲಿ ಅಡಗಿಸಿಟ್ಟಿದ್ದರು. ಆತ ನಿಜಕ್ಕೂ ವಿಶ್ವಶ್ರೇಷ್ಠ ಆಟಗಾರ, ಕ್ರೀಡಾಂಗಣದ ಎಲ್ಲ ಮೂಲೆಗೂ ಚೆಂಡನ್ನು ಅಟ್ಟುವ ಸಾಮಥ್ರ್ಯ ಹೊಂದಿದ್ದಾರೆ. ಅವನೊಬ್ಬ ಸಂಪೂರ್ಣ ಆಟಗಾರನಾಗಿದ್ದು, ಒಂದು ಸದೃಢ ತಂಡವಾಗಿದೆ’ ಎಂದು ಅಖ್ತರ್ ಗುಣಗಾಣ ಮಾಡಿದ್ದಾರೆ.

ರೋಹಿತ್ ಶರ್ಮಾ ಅವರು ತಮ್ಮ ಸ್ಪೋಟಕ ಬ್ಯಾಟಿಂಗ್‍ನಿಂದ ಪಾಕಿಸ್ತಾನದ ಬೌಲಿಂಗ್ ಪಡೆಯನ್ನು ಧ್ವಂಸಗೊಳಿಸಿದ್ದಾರೆ. ಹಿಟ್‍ಮ್ಯಾನ್ ಮತ್ತೆ ಸ್ಪೋಟಕ ಲಯಕ್ಕೆ ಮರಳಿರುವುದನ್ನು ನೋಡಲು ತುಂಬಾ ಸಂತಸವಾಗುತ್ತಿದೆ. ಅವನು ಬೌಲರ್‍ಗಳನ್ನು ದಂಡಿಸುವ ಶಕ್ತಿಯನ್ನು ಹೊಂದಿದ್ದಾನೆ. ಆಟವನ್ನು ತಮ್ಮದೇ ಆದ ಶೈಲಿಯಲ್ಲಿ ಮುಗಿಸುತ್ತಾರೆ. ಅದರಲ್ಲೂ ಪಂದ್ಯದ ಕೊನೆಯ ಓವರ್‍ಗಳಲ್ಲಿ ಬೌಲರ್‍ಗಳನ್ನು ಅವಮಾನಿಸುವ ರೀತಿಯಲ್ಲಿ ಬ್ಯಾಟ್ ಬೀಸುತ್ತಾರೆ’ ಎಂದು ಅಖ್ತರ್ ತಿಳಿಸಿದ್ದಾರೆ.

andolanait

Recent Posts

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…

43 mins ago

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್‌ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ…

47 mins ago

ಬಂಗಾಳದಲ್ಲಿ ಬಿಜೆಪಿಗೆ ಒಂದು ಅವಕಾಶ ಕೊಡಿ: ಅಮಿತ್‌ ಶಾ ಮನವಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…

1 hour ago

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…

2 hours ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

2 hours ago

ಟಿ.ನರಸೀಪುರ: ಗುಂಜಾನರಸಿಂಹಸ್ವಾಮಿ ದರ್ಶನಕ್ಕೆ ಹರಿದುಬಂದ ಜನಸಾಗರ

ಟಿ.ನರಸೀಪುರ: ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದ್ದು, ಟಿ.ನರಸೀಪುರದ ಪ್ರಸಿದ್ಧ ಶ್ರೀ ಗುಂಜಾನರಸಿಂಹಸ್ವಾಮಿ ದೇವಾಲಯದಲ್ಲಿ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ…

3 hours ago