ಕ್ರೀಡೆ

ರೋಹಿತ್ ಶರ್ಮಾ ಒನ್ ಮ್ಯಾನ್ ಆರ್ಮಿ: ಶೋಯಬ್‌ ಅಖ್ತರ್ ಬಣ್ಣನೆ

ಅಹಮದಾಬಾದ್ : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿಯಂತೆ ಪಾಕಿಸ್ತಾನ ಬೌಲರ್‌ಗಳ ಬಲವನ್ನು ಧ್ವಂಸಗೊಳಿಸಿದ್ದಾರೆ ಎಂದು ರಾವಲ್ಪಿಂಡಿ ಎಕ್ಸ್‍ಪ್ರೆಸ್ ಶೋಯೆಬ್ ಅಖ್ತರ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.

ಟೀಮ್ ಇಂಡಿಯಾದ 7 ವಿಕೆಟ್‍ಗಳ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಹಿಟ್ ಮ್ಯಾನ್, 63 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ ನೆರವಿನಿಂದ 86 ರನ್ ಬಾರಿಸಿದ್ದರು. ಒಡಿಐ ಸ್ವರೂಪದಲ್ಲಿ 300 ಸಿಕ್ಸರ್ ಪೂರೈಸಿದ ರೋಹಿತ್ ಶರ್ಮಾ, 2023ನೇ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ 217 ರನ್ ಗಳಿಸುವ ಮೂಲಕ ಗರಿಷ್ಠ 3ನೇ ಸ್ಕೋರರ್ ಆಗಿದ್ದಾರೆ.

ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ಬೌಲರ್‌ಗಳ ಪ್ರದರ್ಶನವು ತುಂಬಾ ಬೇಸರ ತರಿಸಿದೆ. ಭಾರತ ತಂಡವು ಪಾಕಿಸ್ತಾನ ವಿರುದ್ಧ ಎಲ್ಲ ವಿಭಾಗಗಳಲ್ಲೂ ಮೇಲುಗೈ ಸಾಧಿಸಿತ್ತು. ರೋಹಿತ್ ಶರ್ಮಾ ಅವರು ಒನ್ ಮ್ಯಾನ್ ಆರ್ಮಿ ರೀತಿ ಕಂಗೊಳಿಸಿದರು. ಕಳೆದ ಕೆಲವು ವರ್ಷಗಳಿಂದ ರೋಹಿತ್ ಶರ್ಮಾ ಅವರು ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಎಲ್ಲಿ ಅಡಗಿಸಿಟ್ಟಿದ್ದರು. ಆತ ನಿಜಕ್ಕೂ ವಿಶ್ವಶ್ರೇಷ್ಠ ಆಟಗಾರ, ಕ್ರೀಡಾಂಗಣದ ಎಲ್ಲ ಮೂಲೆಗೂ ಚೆಂಡನ್ನು ಅಟ್ಟುವ ಸಾಮಥ್ರ್ಯ ಹೊಂದಿದ್ದಾರೆ. ಅವನೊಬ್ಬ ಸಂಪೂರ್ಣ ಆಟಗಾರನಾಗಿದ್ದು, ಒಂದು ಸದೃಢ ತಂಡವಾಗಿದೆ’ ಎಂದು ಅಖ್ತರ್ ಗುಣಗಾಣ ಮಾಡಿದ್ದಾರೆ.

ರೋಹಿತ್ ಶರ್ಮಾ ಅವರು ತಮ್ಮ ಸ್ಪೋಟಕ ಬ್ಯಾಟಿಂಗ್‍ನಿಂದ ಪಾಕಿಸ್ತಾನದ ಬೌಲಿಂಗ್ ಪಡೆಯನ್ನು ಧ್ವಂಸಗೊಳಿಸಿದ್ದಾರೆ. ಹಿಟ್‍ಮ್ಯಾನ್ ಮತ್ತೆ ಸ್ಪೋಟಕ ಲಯಕ್ಕೆ ಮರಳಿರುವುದನ್ನು ನೋಡಲು ತುಂಬಾ ಸಂತಸವಾಗುತ್ತಿದೆ. ಅವನು ಬೌಲರ್‍ಗಳನ್ನು ದಂಡಿಸುವ ಶಕ್ತಿಯನ್ನು ಹೊಂದಿದ್ದಾನೆ. ಆಟವನ್ನು ತಮ್ಮದೇ ಆದ ಶೈಲಿಯಲ್ಲಿ ಮುಗಿಸುತ್ತಾರೆ. ಅದರಲ್ಲೂ ಪಂದ್ಯದ ಕೊನೆಯ ಓವರ್‍ಗಳಲ್ಲಿ ಬೌಲರ್‍ಗಳನ್ನು ಅವಮಾನಿಸುವ ರೀತಿಯಲ್ಲಿ ಬ್ಯಾಟ್ ಬೀಸುತ್ತಾರೆ’ ಎಂದು ಅಖ್ತರ್ ತಿಳಿಸಿದ್ದಾರೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

12 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

12 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

13 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

22 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

23 hours ago