ಕ್ರೀಡೆ

ICC t20 worldcup 2024: ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆಯಿಟ್ಟ ಬಳಿಕ ʼಹಿಟ್‌ ಮ್ಯಾನ್‌ʼ ಕಣ್ಣೀರು

ಗಯಾನ: ಇಲ್ಲಿನ ಪ್ರೋವಿಡಿಯನ್ಸ್‌ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ನ ಎರಡನೇ ಸೆಮಿ ಫೈನಲ್ಸ್‌ನಲ್ಲಿ ಟೀಂ ಇಂಡಿಯಾ ಹಾಲಿ ಚಾಂಪಿಯನ್ಸ್‌ ಇಂಗ್ಲೆಂಡ್‌ ತಂಡವನ್ನು ಬಗ್ಗು ಬಡಿದು ಫೈನಲ್‌ ಪ್ರವೇಶಿಸಿತು.

ಇಂಗ್ಲೆಂಡ್‌ ತಂಡವನ್ನು 68 ರನ್‌ ಅಂತರದಿಂದ ಮಣಿಸಿ ದಶಕಗಳ ನಂತರ ಟೀಂ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿದೆ. ಈ ವೇಳೆ ನಾಯಕ ರೋಹಿತ್‌ ಶರ್ಮಾ ಭಾವುಕಾರಿದ್ದಾರೆ.

ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್‌ ಶರ್ಮಾ ಅರ್ಧಶತಕ, ಸೂರ್ಯಕುಮಾರ್‌ ಯಾದವ್‌ ಮತ್ತು ಹಾರ್ದಿಕ್‌ ಪಾಂಡ್ಯ ಉತ್ತಮ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಕಲೆಹಾಕಿ ಎದುರಾಳಿ ಇಂಗ್ಲೆಂಡ್‌ಗೆ 172 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್‌ 16.4 ಓವರ್‌ಗಳಲ್ಲಿ 103 ರನ್‌ಗಳಿಗೆ ಆಲ್‌ಔಟ್‌ ಆಗಿ ಟೂರ್ನಿಯಿಂದ ನಿರ್ಗಮಿಸಿತು.

ಇಂಗ್ಲೆಂಡ್‌ ವಿರುದ್ಧ ಗೆದ್ದು ಬೀಗುತ್ತಿದ್ದಂತೆ ಟೀಂ ಇಂಡಿಯಾ ಡ್ರೆಸ್ಸಿಂಗ್‌ ರೂಂ ನಲ್ಲಿ ಸಂಭ್ರಮ ಮನೆ ಮಾಡಿತ್ತು. ಎಲ್ಲರೂ ನಗುಮೊಗದಿಂದ ಡ್ರೆಸ್ಸಿಂಗ್‌ ರೂಂ ಕಡೆಗೆ ಮುಖ ಮಾಡಿದರೇ ಅದಾಗಲೇ ಪೆವಿಲಿಯನ್‌ ಸೇರಿದ್ದ ನಾಯಕ ರೋಹಿತ್‌ ಶರ್ಮಾ ಗ್ಯಾಲರಿಯಲ್ಲಿ ಕುಳಿತು ತಂಡದ ಫೈನಲ್‌ ಪ್ರವೇಶಿಸಿದ್ದನ್ನು ನೆನೆದು ಭಾವುಕಾರದರು.

ಗ್ಯಾಲರಿಯಲ್ಲಿ ಕುಳಿತು ಭಾವುಕರಾಗಿದ್ದ ರೋಹಿತ್‌ ಶರ್ಮಾರನ್ನು ವಿರಾಟ್‌ ಕೊಹ್ಲಿ ಸಂತೈಸುತ್ತಿರುವ ದೃಶ್ಯ ಕಂಡುಬಂದಿದೆ. ಇನ್ನು ಈ ವೀಡಿಯೋ ಸಾಮಾಜಿಕ ಜಾಲತಾಣದ ಸಖತ್‌ ವೈರಲ್‌ ಆಗಿದ್ದು, ಹಿಟ್‌ ಮ್ಯಾನ್‌ ಸಾಧನೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://x.com/tyrion_jon/status/1806419197444207066

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

1 hour ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

1 hour ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

1 hour ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

2 hours ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

3 hours ago

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…

4 hours ago