ಗಯಾನ: ಇಲ್ಲಿನ ಪ್ರೋವಿಡಿಯನ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ನ ಎರಡನೇ ಸೆಮಿ ಫೈನಲ್ಸ್ನಲ್ಲಿ ಟೀಂ ಇಂಡಿಯಾ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ಫೈನಲ್ ಪ್ರವೇಶಿಸಿತು.
ಇಂಗ್ಲೆಂಡ್ ತಂಡವನ್ನು 68 ರನ್ ಅಂತರದಿಂದ ಮಣಿಸಿ ದಶಕಗಳ ನಂತರ ಟೀಂ ಇಂಡಿಯಾ ಟಿ20 ವಿಶ್ವಕಪ್ನಲ್ಲಿ ಫೈನಲ್ ತಲುಪಿದೆ. ಈ ವೇಳೆ ನಾಯಕ ರೋಹಿತ್ ಶರ್ಮಾ ಭಾವುಕಾರಿದ್ದಾರೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್ ಶರ್ಮಾ ಅರ್ಧಶತಕ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಉತ್ತಮ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ ಎದುರಾಳಿ ಇಂಗ್ಲೆಂಡ್ಗೆ 172 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್ 16.4 ಓವರ್ಗಳಲ್ಲಿ 103 ರನ್ಗಳಿಗೆ ಆಲ್ಔಟ್ ಆಗಿ ಟೂರ್ನಿಯಿಂದ ನಿರ್ಗಮಿಸಿತು.
ಇಂಗ್ಲೆಂಡ್ ವಿರುದ್ಧ ಗೆದ್ದು ಬೀಗುತ್ತಿದ್ದಂತೆ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂ ನಲ್ಲಿ ಸಂಭ್ರಮ ಮನೆ ಮಾಡಿತ್ತು. ಎಲ್ಲರೂ ನಗುಮೊಗದಿಂದ ಡ್ರೆಸ್ಸಿಂಗ್ ರೂಂ ಕಡೆಗೆ ಮುಖ ಮಾಡಿದರೇ ಅದಾಗಲೇ ಪೆವಿಲಿಯನ್ ಸೇರಿದ್ದ ನಾಯಕ ರೋಹಿತ್ ಶರ್ಮಾ ಗ್ಯಾಲರಿಯಲ್ಲಿ ಕುಳಿತು ತಂಡದ ಫೈನಲ್ ಪ್ರವೇಶಿಸಿದ್ದನ್ನು ನೆನೆದು ಭಾವುಕಾರದರು.
ಗ್ಯಾಲರಿಯಲ್ಲಿ ಕುಳಿತು ಭಾವುಕರಾಗಿದ್ದ ರೋಹಿತ್ ಶರ್ಮಾರನ್ನು ವಿರಾಟ್ ಕೊಹ್ಲಿ ಸಂತೈಸುತ್ತಿರುವ ದೃಶ್ಯ ಕಂಡುಬಂದಿದೆ. ಇನ್ನು ಈ ವೀಡಿಯೋ ಸಾಮಾಜಿಕ ಜಾಲತಾಣದ ಸಖತ್ ವೈರಲ್ ಆಗಿದ್ದು, ಹಿಟ್ ಮ್ಯಾನ್ ಸಾಧನೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…