ಕ್ರೀಡೆ

ICC t20 worldcup 2024: ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆಯಿಟ್ಟ ಬಳಿಕ ʼಹಿಟ್‌ ಮ್ಯಾನ್‌ʼ ಕಣ್ಣೀರು

ಗಯಾನ: ಇಲ್ಲಿನ ಪ್ರೋವಿಡಿಯನ್ಸ್‌ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ನ ಎರಡನೇ ಸೆಮಿ ಫೈನಲ್ಸ್‌ನಲ್ಲಿ ಟೀಂ ಇಂಡಿಯಾ ಹಾಲಿ ಚಾಂಪಿಯನ್ಸ್‌ ಇಂಗ್ಲೆಂಡ್‌ ತಂಡವನ್ನು ಬಗ್ಗು ಬಡಿದು ಫೈನಲ್‌ ಪ್ರವೇಶಿಸಿತು.

ಇಂಗ್ಲೆಂಡ್‌ ತಂಡವನ್ನು 68 ರನ್‌ ಅಂತರದಿಂದ ಮಣಿಸಿ ದಶಕಗಳ ನಂತರ ಟೀಂ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿದೆ. ಈ ವೇಳೆ ನಾಯಕ ರೋಹಿತ್‌ ಶರ್ಮಾ ಭಾವುಕಾರಿದ್ದಾರೆ.

ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್‌ ಶರ್ಮಾ ಅರ್ಧಶತಕ, ಸೂರ್ಯಕುಮಾರ್‌ ಯಾದವ್‌ ಮತ್ತು ಹಾರ್ದಿಕ್‌ ಪಾಂಡ್ಯ ಉತ್ತಮ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಕಲೆಹಾಕಿ ಎದುರಾಳಿ ಇಂಗ್ಲೆಂಡ್‌ಗೆ 172 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್‌ 16.4 ಓವರ್‌ಗಳಲ್ಲಿ 103 ರನ್‌ಗಳಿಗೆ ಆಲ್‌ಔಟ್‌ ಆಗಿ ಟೂರ್ನಿಯಿಂದ ನಿರ್ಗಮಿಸಿತು.

ಇಂಗ್ಲೆಂಡ್‌ ವಿರುದ್ಧ ಗೆದ್ದು ಬೀಗುತ್ತಿದ್ದಂತೆ ಟೀಂ ಇಂಡಿಯಾ ಡ್ರೆಸ್ಸಿಂಗ್‌ ರೂಂ ನಲ್ಲಿ ಸಂಭ್ರಮ ಮನೆ ಮಾಡಿತ್ತು. ಎಲ್ಲರೂ ನಗುಮೊಗದಿಂದ ಡ್ರೆಸ್ಸಿಂಗ್‌ ರೂಂ ಕಡೆಗೆ ಮುಖ ಮಾಡಿದರೇ ಅದಾಗಲೇ ಪೆವಿಲಿಯನ್‌ ಸೇರಿದ್ದ ನಾಯಕ ರೋಹಿತ್‌ ಶರ್ಮಾ ಗ್ಯಾಲರಿಯಲ್ಲಿ ಕುಳಿತು ತಂಡದ ಫೈನಲ್‌ ಪ್ರವೇಶಿಸಿದ್ದನ್ನು ನೆನೆದು ಭಾವುಕಾರದರು.

ಗ್ಯಾಲರಿಯಲ್ಲಿ ಕುಳಿತು ಭಾವುಕರಾಗಿದ್ದ ರೋಹಿತ್‌ ಶರ್ಮಾರನ್ನು ವಿರಾಟ್‌ ಕೊಹ್ಲಿ ಸಂತೈಸುತ್ತಿರುವ ದೃಶ್ಯ ಕಂಡುಬಂದಿದೆ. ಇನ್ನು ಈ ವೀಡಿಯೋ ಸಾಮಾಜಿಕ ಜಾಲತಾಣದ ಸಖತ್‌ ವೈರಲ್‌ ಆಗಿದ್ದು, ಹಿಟ್‌ ಮ್ಯಾನ್‌ ಸಾಧನೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://x.com/tyrion_jon/status/1806419197444207066

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

9 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago