ಕ್ರೀಡೆ

ಏಷ್ಯಾಕಪ್‌ಗೆ ಚಹಲ್‌ರನ್ನು ಕೈ ಬಿಡಲು ಕಾರಣ ತಿಳಿಸಿದ ರೋಹಿತ್‌ ಶರ್ಮಾ!

ನವದೆಹಲಿ : ತಂಡದಲ್ಲಿ ಬ್ಯಾಟಿಂಗ್‌ ಡೆಪ್ತ್‌ ಹೆಚ್ಚಿಸುವ ಸಲುವಾಗಿ 2023ರ ಏಷ್ಯಾ ಕಪ್‌ ಭಾರತ ತಂಡದಲ್ಲಿ ಲೆಗ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ ಅವರನ್ನು ಆಯ್ಕೆ ಮಾಡಲು ಆಯ್ಕೆದಾರರಿಗೆ ಸಾಧ್ಯವಾಗಲಿಲ್ಲ ಎಂದು ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ಅಜಿತ್‌ ಅಗರ್ಕರ್‌ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಏಷ್ಯಾ ಕಪ್ ಟೂರ್ನಿಗೆ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ, ಯುಜ್ವೇಂದ್ರ ಚಹಲ್‌ ಸೇರಿದಂತೆ ವೆಸ್ಟ್ ಇಂಡೀಸ್‌ ಪ್ರವಾಸದಲ್ಲಿ ಕಾಣಿಸಿಕೊಂಡಿದ್ದ ಐವರು ಆಟಗಾರರನ್ನು ಬಿಸಿಸಿಐ ಕೈ ಬಿಟ್ಟಿದೆ. ಗಾಯದಿಂದ ಕಮ್‌ಬ್ಯಾಕ್‌ ಮಾಡಿರುವ ಕೆ.ಎಲ್‌ ರಾಹುಲ್‌, ಜಸ್‌ಪ್ರೀತ್‌ ಬುಮ್ರಾ ಹಾಗೂ ಶ್ರೇಯಸ್‌ ಅಯ್ಯರ್‌ ಅವರು ತಂಡಕ್ಕೆ ಮರಳಿದ್ದಾರೆ.

ಏಷ್ಯಾ ಕಪ್‌ ಭಾರತ ತಂಡದಲ್ಲಿ ಪೂರ್ಣ ಪ್ರಮಾಣದ ಸ್ಪಿನ್ನರ್‌ ಆಗಿ ಕೇವಲ ಚೈನಾಮನ್‌ ಖ್ಯಾತಿಯ ಕುಲ್ದೀಪ್‌ ಯಾದವ್ ಅವರನ್ನು ಮಾತ್ರ ಆಯ್ಕೆ ಮಾಡಲಿದ್ದು, ಸ್ಪಿನ್‌ ಆಲ್‌ರೌಂಡರ್‌ಗಳಾಗಿ ರವಿಂದ್ರ ಜಡೇಜಾ ಹಾಗೂ ಅಕ್ಷರ್‌ ಪಟೇಲ್‌ ಅವರನ್ನು ಉಳಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯುಜ್ವೇಂದ್ರ ಚಹಲ್‌ ಅವರನ್ನು ಕೈ ಬಿಡಲಾಗಿದೆ. 2019ರ ಏಕದಿನ ವಿಶ್ವಕಪ್‌ ಬಳಿಕ ಚಹಲ್‌ 23 ಪಂದ್ಯಗಳಿಂದ ಮೂರು ಬಾರಿ 4 ವಿಕೆಟ್‌ ಸಾಧನೆ ಸೇರಿದಂತೆ 37 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

8-9ನೇ ಕ್ರಮಾಂಕಗಳಲ್ಲಿ ಬ್ಯಾಟಿಂಗ್‌ ಡೆಪ್ತ್ ಬೇಕು : ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್‌ ಶರ್ಮಾ, “ಆಫ್‌ ಸ್ಪಿನ್ನರ್‌ ಹಾಗೂ ಲೆಗ್‌ ಸ್ಪಿನ್ನರ್‌ ಬಗ್ಗೆ ನಾವು ಆಳವಾದ ಚರ್ಚೆಯನ್ನು ನಡೆಸಿದ್ದೆವು. ಆದರೆ, 8 ಮತ್ತು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಡೆಪ್ತ್‌ ಬೇಕೆಂಬ ಕಾರಣಕ್ಕೆ ಹೆಚ್ಚಿನ ಸ್ಪಿನ್ನರ್‌ಗಳನ್ನು ಆಯ್ಕೆ ಮಾಡಲಾಗಲಿಲ್ಲ,” ಎಂದು ಸ್ಪಷ್ಟನೆ ನೀಡಿದ್ದಾರೆ.

“ಈ ಕ್ರಮಾಂಕಗಳಲ್ಲಿ ಬ್ಯಾಟ್‌ ಮಾಡಬಲ್ಲ ಆಟಗಾರ ನಮಗೆ ಅಗತ್ಯವಿತ್ತು. ಅಕ್ಷರ್‌ ಪಟೇಲ್‌ ಈ ವರ್ಷ ವೈಟ್‌ ಬಾಲ್‌ ಕ್ರಿಕೆಟ್‌ನಲ್ಲಿ ಉತ್ತಮ ರನ್‌ ಗಳಿಸಿದ್ದಾರೆ. ಆದರೆ, ರೆಡ್‌ ಬಾಲ್‌ ಕ್ರಿಕೆಟ್‌ನಲ್ಲಿ ಹೆಚ್ಚಿನ ಅವಕಾಶ ಪಡೆಯದ ಹೊರತಾಗಿಯೂ ಅವರು ವೈಟ್‌ಬಾಲ್‌ ಕ್ರಿಕೆಟ್‌, ವಿಶೇಷವಾಗಿ ಐಪಿಎಲ್‌ನಲ್ಲಿ ಚೆನ್ನಾಗಿ ಬ್ಯಾಟ್‌ ಮಾಡಿದ್ದಾರೆ. ವಿಂಡೀಸ್‌ ಸರಣಿಯಲ್ಲಿ ಇವರಿಗೆ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. ಇವರು ಎಡಗೈ ಬ್ಯಾಟ್ಸ್‌ಮನ್‌ ಆಗಿರುವ ಕಾರಣ ಬ್ಯಾಕೆಂಡ್‌ನಲ್ಲಿ ಸ್ಪಿನ್ನರ್‌ಗಳನ್ನು ಎದುರಿಸಲು ಸಾಧ್ಯವಾಗುತ್ತದೆ,” ಎಂದು ರೋಹಿತ್‌ ಶರ್ಮಾ ತಿಳಿಸಿದ್ದಾರೆ.

ಮುಂದಿನ ಎರಡು ತಿಂಗಳುಗಳಲ್ಲಿ ವೇಗಿಗಳ ಪಾತ್ರ ಮುಖ್ಯ : “ಆಫ್‌ ಸ್ಪಿನ್ನರ್‌ಗಳ ಬಗ್ಗೆಯೂ ನಾವು ಚರ್ಚೆ ನಡೆಸಿದೆವು. ಆರ್‌ ಅಶ್ವಿನ್‌ ಹಾಗೂ ವಾಷಿಂಗ್ಟನ್‌ ಸುಂದರ್‌ ನಮಗೆ ಮಿಸ್‌ ಆಗಿದ್ದಾರೆ. ಮತ್ತೊಂದೆಡೆ ಚಹಲ್‌ಗೂ ಸ್ಥಾನ ಸಿಕ್ಕಿಲ್ಲ. ಏಕೆಂದರೆ ನಾವು ಆಯ್ಕೆ ಮಾಡಿದ್ದು ಕೇವಲ 17 ಆಟಗಾರರನ್ನು ಮಾತ್ರ. ಏಕೆಂದರೆ ಸೀಮರ್‌ಗಳ ಜೊತೆ ಕೇವಲ ಒಬ್ಬರು ಸ್ಪಿನ್ನರ್‌ ಅನ್ನು ಆಡಿಸಬೇಕೆಂದು ಅಂದುಕೊಂಡಿದ್ದೇವೆ. ಮುಂದಿನ ಎರಡು ತಿಂಗಳುಗಳ ಕಾಲ ವೇಗದ ಬೌಲರ್‌ಗಳು ಮಹತ್ವದ ಪಾತ್ರವನ್ನು ನಿರ್ವಹಿಸಬೇಕಾಗುತ್ತದೆ. ಹಾಗಾಗಿ ವೇಗಿಗಳಿಗೆ ಹೆಚ್ಚಿನ ಅವಕಾಶ ನೀಡುವ ಮೂಲಕ ಅವರಿಗೆ ಅವರದೇ ಆದ ಗೇಮ್ ಟೈಮ್‌ ನೀಡಬೇಕಾಗಿದೆ,” ಎಂದು ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮ ಸ್ಪಷ್ಟಪಡಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago