ನವದೆಹಲಿ: ಇದೇ ಸೆಪ್ಟೆಂಬರ್ 5 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಭಾಗವಹಿಸುವಂತೆ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಲಾಗಿದೆ.
ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡ ಬಳಿಕ ಮುಂಬರುವ ಸರಣಿಗಳಲ್ಲಿ ಭಾರತ ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ ತೋರಲು ದುಲೀಪ್ ಟ್ರೋಫಿ ಉತ್ತಮ ವೇದಿಕೆಯಾಗಿದ್ದು, ಅದನ್ನು ಬಳಸಿಕೊಳ್ಳುವಂತೆ ಬಿಸಿಸಿಐ ತಿಳಿಸಿದೆ ಎನ್ನಲಾಗಿದೆ.
ಅಂದಹಾಗೆ ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರಿಗೆ ಬಿಸಿಸಿಐ ನಿರ್ದೇಶನ ನೀಡಿದೆ. ಹೀಗಾಗಿ ಮುಂಬರುವ ದೇಸೀಯ ಟೂರ್ನಿಗಳಲ್ಲಿ ಭಾರತದ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಬರೀ ರೋಹಿತ್, ಕೊಹ್ಲಿಗೆ ಮಾತ್ರವಲ್ಲದೇ, ಕನ್ನಡಿಗ ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕಲ್ದೀಪ್ ಯಾದವ್, ಜೈಸ್ವಾಲ್, ಶುಬ್ಮನ್ ಗಿಲ್ ಗೆ ದೇಸಿ ಟೂರ್ನಿಗಳಲ್ಲಿ ಆಡುವಂತೆ ಸೂಚಿಸಲಾಗಿದೆ.
ಶ್ರೀಲಂಕಾ ಸರಣಿ ಬಳಿಕ ಇದೇ ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶದ ವಿರುದ್ಧ ಮೊದಲ ಟೆಸ್ಟ್ ಆಡುವ ಮೂಲಕ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಸರಣಿ ಆರಂಭವಾಗುತ್ತದೆ. ಇದಕ್ಕೂ ಮೊದಲು ಸಿದ್ಧತೆ ನಡೆಸಿಕೊಳ್ಳಲು ಭಾರತ ತಂಡದ ಆಟಗಾರರಿಗೆ ವೇದಿಕೆ ನೀಡಲಾಗಿದೆ.
ಸೆಪ್ಟೆಂಬರ್ 5ರಿಂದ 24 ವರೆಗೆ ದುಲೀಪ್ ಟ್ರೋಫಿ ನಡೆಯಲಿದ್ದು, ಇದರಲ್ಲಿ ಆರು ವಲಯಗಳು ಭಾಗವಹಿಸಲಿವೆ.
ಕೇಂದ್ರ, ದಕ್ಷಿಣ, ಪೂರ್ವ, ಪಶ್ಚಿಮ, ಉತ್ತರ ಹಾಗೂ ಈಶಾನ್ಯ ವಲಯಗಳು ಈ ಟ್ರೋಫಿ ಆಡಲಿವೆ. ದಕ್ಷಿಣ ವಲಯದಲ್ಲಿ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಕೇರಳ, ಹೈದರಾಬಾದ್, ಪಾಂಡಿಚೇರಿ ಹಾಗೂ ಗೋವಾ ತಂಡಗಳು ಆಡಲಿವೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…