ನವದೆಹಲಿ: ಇದೇ ಸೆಪ್ಟೆಂಬರ್ 5 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಭಾಗವಹಿಸುವಂತೆ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಲಾಗಿದೆ.
ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡ ಬಳಿಕ ಮುಂಬರುವ ಸರಣಿಗಳಲ್ಲಿ ಭಾರತ ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ ತೋರಲು ದುಲೀಪ್ ಟ್ರೋಫಿ ಉತ್ತಮ ವೇದಿಕೆಯಾಗಿದ್ದು, ಅದನ್ನು ಬಳಸಿಕೊಳ್ಳುವಂತೆ ಬಿಸಿಸಿಐ ತಿಳಿಸಿದೆ ಎನ್ನಲಾಗಿದೆ.
ಅಂದಹಾಗೆ ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರಿಗೆ ಬಿಸಿಸಿಐ ನಿರ್ದೇಶನ ನೀಡಿದೆ. ಹೀಗಾಗಿ ಮುಂಬರುವ ದೇಸೀಯ ಟೂರ್ನಿಗಳಲ್ಲಿ ಭಾರತದ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಬರೀ ರೋಹಿತ್, ಕೊಹ್ಲಿಗೆ ಮಾತ್ರವಲ್ಲದೇ, ಕನ್ನಡಿಗ ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕಲ್ದೀಪ್ ಯಾದವ್, ಜೈಸ್ವಾಲ್, ಶುಬ್ಮನ್ ಗಿಲ್ ಗೆ ದೇಸಿ ಟೂರ್ನಿಗಳಲ್ಲಿ ಆಡುವಂತೆ ಸೂಚಿಸಲಾಗಿದೆ.
ಶ್ರೀಲಂಕಾ ಸರಣಿ ಬಳಿಕ ಇದೇ ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶದ ವಿರುದ್ಧ ಮೊದಲ ಟೆಸ್ಟ್ ಆಡುವ ಮೂಲಕ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಸರಣಿ ಆರಂಭವಾಗುತ್ತದೆ. ಇದಕ್ಕೂ ಮೊದಲು ಸಿದ್ಧತೆ ನಡೆಸಿಕೊಳ್ಳಲು ಭಾರತ ತಂಡದ ಆಟಗಾರರಿಗೆ ವೇದಿಕೆ ನೀಡಲಾಗಿದೆ.
ಸೆಪ್ಟೆಂಬರ್ 5ರಿಂದ 24 ವರೆಗೆ ದುಲೀಪ್ ಟ್ರೋಫಿ ನಡೆಯಲಿದ್ದು, ಇದರಲ್ಲಿ ಆರು ವಲಯಗಳು ಭಾಗವಹಿಸಲಿವೆ.
ಕೇಂದ್ರ, ದಕ್ಷಿಣ, ಪೂರ್ವ, ಪಶ್ಚಿಮ, ಉತ್ತರ ಹಾಗೂ ಈಶಾನ್ಯ ವಲಯಗಳು ಈ ಟ್ರೋಫಿ ಆಡಲಿವೆ. ದಕ್ಷಿಣ ವಲಯದಲ್ಲಿ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಕೇರಳ, ಹೈದರಾಬಾದ್, ಪಾಂಡಿಚೇರಿ ಹಾಗೂ ಗೋವಾ ತಂಡಗಳು ಆಡಲಿವೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…