ನವದೆಹಲಿ: ಇದೇ ಸೆಪ್ಟೆಂಬರ್ 5 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಭಾಗವಹಿಸುವಂತೆ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಲಾಗಿದೆ.
ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡ ಬಳಿಕ ಮುಂಬರುವ ಸರಣಿಗಳಲ್ಲಿ ಭಾರತ ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ ತೋರಲು ದುಲೀಪ್ ಟ್ರೋಫಿ ಉತ್ತಮ ವೇದಿಕೆಯಾಗಿದ್ದು, ಅದನ್ನು ಬಳಸಿಕೊಳ್ಳುವಂತೆ ಬಿಸಿಸಿಐ ತಿಳಿಸಿದೆ ಎನ್ನಲಾಗಿದೆ.
ಅಂದಹಾಗೆ ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರಿಗೆ ಬಿಸಿಸಿಐ ನಿರ್ದೇಶನ ನೀಡಿದೆ. ಹೀಗಾಗಿ ಮುಂಬರುವ ದೇಸೀಯ ಟೂರ್ನಿಗಳಲ್ಲಿ ಭಾರತದ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಬರೀ ರೋಹಿತ್, ಕೊಹ್ಲಿಗೆ ಮಾತ್ರವಲ್ಲದೇ, ಕನ್ನಡಿಗ ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕಲ್ದೀಪ್ ಯಾದವ್, ಜೈಸ್ವಾಲ್, ಶುಬ್ಮನ್ ಗಿಲ್ ಗೆ ದೇಸಿ ಟೂರ್ನಿಗಳಲ್ಲಿ ಆಡುವಂತೆ ಸೂಚಿಸಲಾಗಿದೆ.
ಶ್ರೀಲಂಕಾ ಸರಣಿ ಬಳಿಕ ಇದೇ ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶದ ವಿರುದ್ಧ ಮೊದಲ ಟೆಸ್ಟ್ ಆಡುವ ಮೂಲಕ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಸರಣಿ ಆರಂಭವಾಗುತ್ತದೆ. ಇದಕ್ಕೂ ಮೊದಲು ಸಿದ್ಧತೆ ನಡೆಸಿಕೊಳ್ಳಲು ಭಾರತ ತಂಡದ ಆಟಗಾರರಿಗೆ ವೇದಿಕೆ ನೀಡಲಾಗಿದೆ.
ಸೆಪ್ಟೆಂಬರ್ 5ರಿಂದ 24 ವರೆಗೆ ದುಲೀಪ್ ಟ್ರೋಫಿ ನಡೆಯಲಿದ್ದು, ಇದರಲ್ಲಿ ಆರು ವಲಯಗಳು ಭಾಗವಹಿಸಲಿವೆ.
ಕೇಂದ್ರ, ದಕ್ಷಿಣ, ಪೂರ್ವ, ಪಶ್ಚಿಮ, ಉತ್ತರ ಹಾಗೂ ಈಶಾನ್ಯ ವಲಯಗಳು ಈ ಟ್ರೋಫಿ ಆಡಲಿವೆ. ದಕ್ಷಿಣ ವಲಯದಲ್ಲಿ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಕೇರಳ, ಹೈದರಾಬಾದ್, ಪಾಂಡಿಚೇರಿ ಹಾಗೂ ಗೋವಾ ತಂಡಗಳು ಆಡಲಿವೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…