ನವದೆಹಲಿ: ಇದೇ ಸೆಪ್ಟೆಂಬರ್ 5 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಭಾಗವಹಿಸುವಂತೆ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಲಾಗಿದೆ.
ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡ ಬಳಿಕ ಮುಂಬರುವ ಸರಣಿಗಳಲ್ಲಿ ಭಾರತ ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ ತೋರಲು ದುಲೀಪ್ ಟ್ರೋಫಿ ಉತ್ತಮ ವೇದಿಕೆಯಾಗಿದ್ದು, ಅದನ್ನು ಬಳಸಿಕೊಳ್ಳುವಂತೆ ಬಿಸಿಸಿಐ ತಿಳಿಸಿದೆ ಎನ್ನಲಾಗಿದೆ.
ಅಂದಹಾಗೆ ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರಿಗೆ ಬಿಸಿಸಿಐ ನಿರ್ದೇಶನ ನೀಡಿದೆ. ಹೀಗಾಗಿ ಮುಂಬರುವ ದೇಸೀಯ ಟೂರ್ನಿಗಳಲ್ಲಿ ಭಾರತದ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಬರೀ ರೋಹಿತ್, ಕೊಹ್ಲಿಗೆ ಮಾತ್ರವಲ್ಲದೇ, ಕನ್ನಡಿಗ ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕಲ್ದೀಪ್ ಯಾದವ್, ಜೈಸ್ವಾಲ್, ಶುಬ್ಮನ್ ಗಿಲ್ ಗೆ ದೇಸಿ ಟೂರ್ನಿಗಳಲ್ಲಿ ಆಡುವಂತೆ ಸೂಚಿಸಲಾಗಿದೆ.
ಶ್ರೀಲಂಕಾ ಸರಣಿ ಬಳಿಕ ಇದೇ ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶದ ವಿರುದ್ಧ ಮೊದಲ ಟೆಸ್ಟ್ ಆಡುವ ಮೂಲಕ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಸರಣಿ ಆರಂಭವಾಗುತ್ತದೆ. ಇದಕ್ಕೂ ಮೊದಲು ಸಿದ್ಧತೆ ನಡೆಸಿಕೊಳ್ಳಲು ಭಾರತ ತಂಡದ ಆಟಗಾರರಿಗೆ ವೇದಿಕೆ ನೀಡಲಾಗಿದೆ.
ಸೆಪ್ಟೆಂಬರ್ 5ರಿಂದ 24 ವರೆಗೆ ದುಲೀಪ್ ಟ್ರೋಫಿ ನಡೆಯಲಿದ್ದು, ಇದರಲ್ಲಿ ಆರು ವಲಯಗಳು ಭಾಗವಹಿಸಲಿವೆ.
ಕೇಂದ್ರ, ದಕ್ಷಿಣ, ಪೂರ್ವ, ಪಶ್ಚಿಮ, ಉತ್ತರ ಹಾಗೂ ಈಶಾನ್ಯ ವಲಯಗಳು ಈ ಟ್ರೋಫಿ ಆಡಲಿವೆ. ದಕ್ಷಿಣ ವಲಯದಲ್ಲಿ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಕೇರಳ, ಹೈದರಾಬಾದ್, ಪಾಂಡಿಚೇರಿ ಹಾಗೂ ಗೋವಾ ತಂಡಗಳು ಆಡಲಿವೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…