ಸದ್ಯ ಭಾರತದಲ್ಲಿ ಏಕದಿನ ವಿಶ್ವಕಪ್ ಸಮರ ನಡೆಯುತ್ತಿದ್ದು ಭಾರತ, ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್ ಸುತ್ತಿಗೆ ಅಧಿಕೃತವಾಗಿ ಪ್ರವೇಶ ಪಡೆದುಕೊಂಡಿವೆ. ಇನ್ನುಳಿದ ಒಂದು ಸ್ಥಾನಕ್ಕೆ ನ್ಯೂಜಿಲೆಂಡ್ ತಂಡ ಅರ್ಹತೆ ಗಿಟ್ಟಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಈ ನಾಲ್ಕು ತಂಡಗಳಲ್ಲಿ ಯಾವ ತಂಡ ಚಾಂಪಿಯನ್ ಆಗಲಿದೆ ಎಂಬ ಕುತೂಹಲ ಮೂಡಿದೆ.
ಇನ್ನು ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್ನಲ್ಲಿ ಅತಿ ಹೆಚ್ಚು ಯಶಸ್ಸು ಸಾಧಿಸಿದ ತಂಡ ಎಂಬ ದಾಖಲೆ ಬರೆದಿದೆ. ಹೌದು, ಟೀಮ್ ಇಂಡಿಯಾ ಇಲ್ಲಿಯವರೆಗೂ ಆಡಿರುವ ಎಲ್ಲಾ ಎಂಟು ಲೀಗ್ ಪಂದ್ಯಗಳಲ್ಲಿಯೂ ಭರ್ಜರಿ ಜಯ ಸಾಧಿಸಿದ್ದು, ಸೆಮೀಸ್ಗೆ ಲಗ್ಗೆ ಇಟ್ಟ ಮೊದಲ ತಂಡ ಎನಿಸಿಕೊಂಡಿತ್ತು.
ತಂಡದ ಎಲ್ಲಾ ವಿಭಾಗವೂ ಯಶಸ್ವಿ ಪ್ರದರ್ಶನ ನೀಡುತ್ತಿರುವ ಕಾರಣ ತಂಡ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ್ದು, ನಾಯಕ ರೋಹಿತ್ ಶರ್ಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸಹ ಈ ಕುರಿತು ಪ್ರತಿಕ್ರಿಯಿಸಿದ್ದು, ರೋಹಿತ್ ಶರ್ಮಾ ನಾಯಕನಾಗಲು ತಾನು ಸ್ವತಃ ಒತ್ತಾಯಿಸಿದ್ದೆ ಎಂಬ ವಿಚಾರವನ್ನು ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಗೂಲಿ ಮೊದಲಿಗೆ ರೋಹಿತ್ಗೆ ನಾಯಕತ್ವವನ್ನು ವಹಿಸುಕೊಳ್ಳುವಂತೆ ತಾವು ಕೇಳಿದ್ದಾಗ ನಿರಾಕರಿಸಿದ್ದರು ಎಂದಿದ್ದಾರೆ. “ಎಲ್ಲಾ ಮೂರು ಮಾದರಿಯ ಕ್ರಿಕೆಟ್ ಆಡಬೇಕಿದ್ದ ಕಾರಣ ಒತ್ತಡ ಹೆಚ್ಚಿದ್ದರಿಂದ ರೋಹಿತ್ಗೆ ನಾಯಕನ ಪಟ್ಟ ಬೇಕಿರಲಿಲ್ಲ. ಒಂದು ಹಂತದಲ್ಲಿ ನೀನು ನಾಯಕನಾಗಲು ಒಪ್ಪದೇ ಇದ್ದರೆ ನಾನೇ ಸ್ವತಃ ನಿನ್ನ ಹೆಸರನ್ನು ಘೋಷಿಸುತ್ತೇನೆ ಎಂದಿದ್ದೆ. ಆತ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರ ಬಗ್ಗೆ ನನಗೆ ಸಂತಸವಿದೆ, ಆತ ಅಚ್ಚುಕಟ್ಟಾಗಿ ನಾಯಕತ್ವ ನಿರ್ವಹಿಸುತ್ತಿದ್ದಾನೆ, ಫಲಿತಾಂಶವನ್ನು ನೀವೇ ನೋಡಬಹುದಾಗಿದೆ” ಎಂದು ಗಂಗೂಲಿ ಹೇಳಿದ್ದಾರೆ.
ಹೀಗೆ ಗಂಗೂಲಿ ನೀಡಿದ ಹೇಳಿಕೆ ಈ ಹಿಂದೆ ಎದ್ದಿದ್ದ ದೊಡ್ಡ ವಿವಾದವನ್ನು ಮತ್ತೆ ಮುನ್ನೆಲೆಗೆ ತಂದಿದೆ. ಹೌದು, ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಆಗ ಬಿಸಿಸಿಐ ಅಧ್ಯಕ್ಷನಾಗಿದ್ದ ಗಂಗೂಲಿ ಎಂಬ ಸುದ್ದಿ ಹರಿದಾಡಿತ್ತು. ಇದರಿಂದ ಕೊಹ್ಲಿ ಅಭಿಮಾನಿಗಳು ದಾದಾ ವಿರುದ್ಧ ತಿರುಗಿಬಿದ್ದಿದ್ರು. ಸದ್ಯ ರೋಹಿತ್ ಅನ್ನು ಒತ್ತಾಯಪೂರ್ವಕವಾಗಿ ನಾಯಕ ಮಾಡಿದೆ ಎಂಬ ದಾದಾ ಹೇಳಿಕೆ ಕೊಹ್ಲಿ ಅಭಿಮಾನಿಗಳನ್ನು ಮತ್ತೆ ಕೆರಳಿಸಿದೆ.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…