ಕ್ರೀಡೆ

ʼರೋಹಿತ್‌ ನಾಯಕನಾಗಲು ನಾನೇ ಕಾರಣʼ; ಗಂಗೂಲಿ ಹೇಳಿಕೆಗೆ ಕೊಹ್ಲಿ ಫ್ಯಾನ್ಸ್‌ ಗರಂ

ಸದ್ಯ ಭಾರತದಲ್ಲಿ ಏಕದಿನ ವಿಶ್ವಕಪ್‌ ಸಮರ ನಡೆಯುತ್ತಿದ್ದು ಭಾರತ, ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್‌ ಸುತ್ತಿಗೆ ಅಧಿಕೃತವಾಗಿ ಪ್ರವೇಶ ಪಡೆದುಕೊಂಡಿವೆ. ಇನ್ನುಳಿದ ಒಂದು ಸ್ಥಾನಕ್ಕೆ ನ್ಯೂಜಿಲೆಂಡ್‌ ತಂಡ ಅರ್ಹತೆ ಗಿಟ್ಟಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಈ ನಾಲ್ಕು ತಂಡಗಳಲ್ಲಿ ಯಾವ ತಂಡ ಚಾಂಪಿಯನ್‌ ಆಗಲಿದೆ ಎಂಬ ಕುತೂಹಲ ಮೂಡಿದೆ.

ಇನ್ನು ಟೀಮ್‌ ಇಂಡಿಯಾ ಈ ಬಾರಿಯ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಯಶಸ್ಸು ಸಾಧಿಸಿದ ತಂಡ ಎಂಬ ದಾಖಲೆ ಬರೆದಿದೆ. ಹೌದು, ಟೀಮ್‌ ಇಂಡಿಯಾ ಇಲ್ಲಿಯವರೆಗೂ ಆಡಿರುವ ಎಲ್ಲಾ ಎಂಟು ಲೀಗ್‌ ಪಂದ್ಯಗಳಲ್ಲಿಯೂ ಭರ್ಜರಿ ಜಯ ಸಾಧಿಸಿದ್ದು, ಸೆಮೀಸ್‌ಗೆ ಲಗ್ಗೆ ಇಟ್ಟ ಮೊದಲ ತಂಡ ಎನಿಸಿಕೊಂಡಿತ್ತು.

ತಂಡದ ಎಲ್ಲಾ ವಿಭಾಗವೂ ಯಶಸ್ವಿ ಪ್ರದರ್ಶನ ನೀಡುತ್ತಿರುವ ಕಾರಣ ತಂಡ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ್ದು, ನಾಯಕ ರೋಹಿತ್‌ ಶರ್ಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್‌ ಗಂಗೂಲಿ ಸಹ ಈ ಕುರಿತು ಪ್ರತಿಕ್ರಿಯಿಸಿದ್ದು, ರೋಹಿತ್‌ ಶರ್ಮಾ ನಾಯಕನಾಗಲು ತಾನು ಸ್ವತಃ ಒತ್ತಾಯಿಸಿದ್ದೆ ಎಂಬ ವಿಚಾರವನ್ನು ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಗೂಲಿ ಮೊದಲಿಗೆ ರೋಹಿತ್‌ಗೆ ನಾಯಕತ್ವವನ್ನು ವಹಿಸುಕೊಳ್ಳುವಂತೆ ತಾವು ಕೇಳಿದ್ದಾಗ ನಿರಾಕರಿಸಿದ್ದರು ಎಂದಿದ್ದಾರೆ. “ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ ಆಡಬೇಕಿದ್ದ ಕಾರಣ ಒತ್ತಡ ಹೆಚ್ಚಿದ್ದರಿಂದ ರೋಹಿತ್‌ಗೆ ನಾಯಕನ ಪಟ್ಟ ಬೇಕಿರಲಿಲ್ಲ. ಒಂದು ಹಂತದಲ್ಲಿ ನೀನು ನಾಯಕನಾಗಲು ಒಪ್ಪದೇ ಇದ್ದರೆ ನಾನೇ ಸ್ವತಃ ನಿನ್ನ ಹೆಸರನ್ನು ಘೋಷಿಸುತ್ತೇನೆ ಎಂದಿದ್ದೆ. ಆತ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರ ಬಗ್ಗೆ ನನಗೆ ಸಂತಸವಿದೆ, ಆತ ಅಚ್ಚುಕಟ್ಟಾಗಿ ನಾಯಕತ್ವ ನಿರ್ವಹಿಸುತ್ತಿದ್ದಾನೆ, ಫಲಿತಾಂಶವನ್ನು ನೀವೇ ನೋಡಬಹುದಾಗಿದೆ” ಎಂದು ಗಂಗೂಲಿ ಹೇಳಿದ್ದಾರೆ.

ಹೀಗೆ ಗಂಗೂಲಿ ನೀಡಿದ ಹೇಳಿಕೆ ಈ ಹಿಂದೆ ಎದ್ದಿದ್ದ ದೊಡ್ಡ ವಿವಾದವನ್ನು ಮತ್ತೆ ಮುನ್ನೆಲೆಗೆ ತಂದಿದೆ. ಹೌದು, ವಿರಾಟ್‌ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಆಗ ಬಿಸಿಸಿಐ ಅಧ್ಯಕ್ಷನಾಗಿದ್ದ ಗಂಗೂಲಿ ಎಂಬ ಸುದ್ದಿ ಹರಿದಾಡಿತ್ತು. ಇದರಿಂದ ಕೊಹ್ಲಿ ಅಭಿಮಾನಿಗಳು ದಾದಾ ವಿರುದ್ಧ ತಿರುಗಿಬಿದ್ದಿದ್ರು. ಸದ್ಯ ರೋಹಿತ್‌ ಅನ್ನು ಒತ್ತಾಯಪೂರ್ವಕವಾಗಿ ನಾಯಕ ಮಾಡಿದೆ ಎಂಬ ದಾದಾ ಹೇಳಿಕೆ ಕೊಹ್ಲಿ ಅಭಿಮಾನಿಗಳನ್ನು ಮತ್ತೆ ಕೆರಳಿಸಿದೆ.

andolana

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

2 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

2 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

3 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

3 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

3 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

3 hours ago