ಕ್ರೀಡೆ

ʼರೋಹಿತ್‌ ನಾಯಕನಾಗಲು ನಾನೇ ಕಾರಣʼ; ಗಂಗೂಲಿ ಹೇಳಿಕೆಗೆ ಕೊಹ್ಲಿ ಫ್ಯಾನ್ಸ್‌ ಗರಂ

ಸದ್ಯ ಭಾರತದಲ್ಲಿ ಏಕದಿನ ವಿಶ್ವಕಪ್‌ ಸಮರ ನಡೆಯುತ್ತಿದ್ದು ಭಾರತ, ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್‌ ಸುತ್ತಿಗೆ ಅಧಿಕೃತವಾಗಿ ಪ್ರವೇಶ ಪಡೆದುಕೊಂಡಿವೆ. ಇನ್ನುಳಿದ ಒಂದು ಸ್ಥಾನಕ್ಕೆ ನ್ಯೂಜಿಲೆಂಡ್‌ ತಂಡ ಅರ್ಹತೆ ಗಿಟ್ಟಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಈ ನಾಲ್ಕು ತಂಡಗಳಲ್ಲಿ ಯಾವ ತಂಡ ಚಾಂಪಿಯನ್‌ ಆಗಲಿದೆ ಎಂಬ ಕುತೂಹಲ ಮೂಡಿದೆ.

ಇನ್ನು ಟೀಮ್‌ ಇಂಡಿಯಾ ಈ ಬಾರಿಯ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಯಶಸ್ಸು ಸಾಧಿಸಿದ ತಂಡ ಎಂಬ ದಾಖಲೆ ಬರೆದಿದೆ. ಹೌದು, ಟೀಮ್‌ ಇಂಡಿಯಾ ಇಲ್ಲಿಯವರೆಗೂ ಆಡಿರುವ ಎಲ್ಲಾ ಎಂಟು ಲೀಗ್‌ ಪಂದ್ಯಗಳಲ್ಲಿಯೂ ಭರ್ಜರಿ ಜಯ ಸಾಧಿಸಿದ್ದು, ಸೆಮೀಸ್‌ಗೆ ಲಗ್ಗೆ ಇಟ್ಟ ಮೊದಲ ತಂಡ ಎನಿಸಿಕೊಂಡಿತ್ತು.

ತಂಡದ ಎಲ್ಲಾ ವಿಭಾಗವೂ ಯಶಸ್ವಿ ಪ್ರದರ್ಶನ ನೀಡುತ್ತಿರುವ ಕಾರಣ ತಂಡ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ್ದು, ನಾಯಕ ರೋಹಿತ್‌ ಶರ್ಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್‌ ಗಂಗೂಲಿ ಸಹ ಈ ಕುರಿತು ಪ್ರತಿಕ್ರಿಯಿಸಿದ್ದು, ರೋಹಿತ್‌ ಶರ್ಮಾ ನಾಯಕನಾಗಲು ತಾನು ಸ್ವತಃ ಒತ್ತಾಯಿಸಿದ್ದೆ ಎಂಬ ವಿಚಾರವನ್ನು ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಗೂಲಿ ಮೊದಲಿಗೆ ರೋಹಿತ್‌ಗೆ ನಾಯಕತ್ವವನ್ನು ವಹಿಸುಕೊಳ್ಳುವಂತೆ ತಾವು ಕೇಳಿದ್ದಾಗ ನಿರಾಕರಿಸಿದ್ದರು ಎಂದಿದ್ದಾರೆ. “ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ ಆಡಬೇಕಿದ್ದ ಕಾರಣ ಒತ್ತಡ ಹೆಚ್ಚಿದ್ದರಿಂದ ರೋಹಿತ್‌ಗೆ ನಾಯಕನ ಪಟ್ಟ ಬೇಕಿರಲಿಲ್ಲ. ಒಂದು ಹಂತದಲ್ಲಿ ನೀನು ನಾಯಕನಾಗಲು ಒಪ್ಪದೇ ಇದ್ದರೆ ನಾನೇ ಸ್ವತಃ ನಿನ್ನ ಹೆಸರನ್ನು ಘೋಷಿಸುತ್ತೇನೆ ಎಂದಿದ್ದೆ. ಆತ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರ ಬಗ್ಗೆ ನನಗೆ ಸಂತಸವಿದೆ, ಆತ ಅಚ್ಚುಕಟ್ಟಾಗಿ ನಾಯಕತ್ವ ನಿರ್ವಹಿಸುತ್ತಿದ್ದಾನೆ, ಫಲಿತಾಂಶವನ್ನು ನೀವೇ ನೋಡಬಹುದಾಗಿದೆ” ಎಂದು ಗಂಗೂಲಿ ಹೇಳಿದ್ದಾರೆ.

ಹೀಗೆ ಗಂಗೂಲಿ ನೀಡಿದ ಹೇಳಿಕೆ ಈ ಹಿಂದೆ ಎದ್ದಿದ್ದ ದೊಡ್ಡ ವಿವಾದವನ್ನು ಮತ್ತೆ ಮುನ್ನೆಲೆಗೆ ತಂದಿದೆ. ಹೌದು, ವಿರಾಟ್‌ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಆಗ ಬಿಸಿಸಿಐ ಅಧ್ಯಕ್ಷನಾಗಿದ್ದ ಗಂಗೂಲಿ ಎಂಬ ಸುದ್ದಿ ಹರಿದಾಡಿತ್ತು. ಇದರಿಂದ ಕೊಹ್ಲಿ ಅಭಿಮಾನಿಗಳು ದಾದಾ ವಿರುದ್ಧ ತಿರುಗಿಬಿದ್ದಿದ್ರು. ಸದ್ಯ ರೋಹಿತ್‌ ಅನ್ನು ಒತ್ತಾಯಪೂರ್ವಕವಾಗಿ ನಾಯಕ ಮಾಡಿದೆ ಎಂಬ ದಾದಾ ಹೇಳಿಕೆ ಕೊಹ್ಲಿ ಅಭಿಮಾನಿಗಳನ್ನು ಮತ್ತೆ ಕೆರಳಿಸಿದೆ.

andolana

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago