ಕ್ರೀಡೆ

ರೊನಾಲ್ಡೊ ನೂತನ ದಾಖಲೆ: ಯೂಟ್ಯೂಬ್‌ ಆರಂಭಿಸಿದ ಮೂರೇ ದಿನಕ್ಕೆ 54 ಮಿಲಿಯನ್‌ ಚಂದಾದಾರರು!

ವಿಶ್ವ ವಿಖ್ಯಾತ ತಾರೆಗಳು ತಮ್ಮ ಅಭಿಮಾನಿಗಳನ್ನು ಕನೆಕ್ಟ್‌ ಆಗಲು ಬಯಸುವವರು ಜನಪ್ರಿಯ ಸ್ಟ್ರೀಮಿಂಗ್‌ ಅಪ್ಲಕೇಷನ್‌ ಯೂಟ್ಯೂಬ್‌ನಲ್ಲಿ ತಮ್ಮ ಖಾತೆಗಳನ್ನು ತೆರೆಯುತ್ತಾರೆ. ಆ ಮೂಲಕ ಅಭಿಮಾನಿಗಳಿಗೆ ವೇಗವಾಗಿ ಕನೆಕ್ಟ್‌ ಆಗುತ್ತಾರೆ. ಏಕೆಂದರೆ ಯೂಟ್ಯೂಬ್‌ ಜನರೊಂದಿಗೆ ನೇರ ಸಂಪರ್ಕ ಬೆಸೆಯುವ ಬಹಳ ಪ್ರಬಲವಾದ ಸೋಷಿಯಲ್‌ ಮೀಡಿಯಾ ಫ್ಲಾಟ್‌ಫಾರ್ಮ್‌ ಆಗಿದೆ.

ದಿಗ್ಗಜ ಫುಟ್ಬಾಲರ್‌ ಕ್ರಿಸ್ಟಿಯಾನೋ ರೊನಾಲ್ಡೊ ಅವರು ತಮ್ಮ ಹೊಸ ಯೂಟ್ಯೂಬ್‌ ಖಾತೆ ತೆರೆದಿದ್ದಾರೆ. ಅವರು ತಮ್ಮ ಹೊಸ ಖಾತೆಗೆ UR cristiano ಎಂದು ಹೆಸರಿಟ್ಟಿದ್ದಾರೆ.

ಇದೇ ಆಗಸ್ಟ್‌ 28 ರಂದು ಆರಂಭವಾದ ನೂತನ ಚಾನಲ್‌ ಕೇವಲ ಮೂರೇ ದಿನಕ್ಕೆ ಬರೋಬ್ಬರಿ 54 ಮಿಲಿಯನ್‌ ಸಬ್‌ಸ್ಕ್ರೈಬರ್‌ ಗಳಿಸಿಕೊಂಡಿದೆ. ಆ ಮೂಲಕ ಅತೀ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಫಾಲೋವರ್ಸ್‌ ಪಡೆದ ಏಕೈಕ ಚಾನೆಲ್‌ ಎಂಬ ದಾಖಲೆ UR cristiano ಯೂಟ್ಯೂಬ್‌ ಅಕೌಂಟ್‌ ಪಾಲಾಗಿದೆ.

ಈ ಮೂರು ದಿನಗಳಲ್ಲಿ 25 ವೀಡಿಯೋಗಳನ್ನು ತಮ್ಮ ಖಾತೆಯಲ್ಲೊ ರೊನಾಲ್ಡೊ ಹಂಚಿಕೊಂಡಿದ್ದು, ಎಲ್ಲಾ ವಿಡಿಯೋಗಳಿಂದ ಸುಮಾರು 40 ಕೋಟಿ ವೀಕ್ಷಣೆ ಪಡೆದುಕೊಂಡಿವೆ.

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮದೇ ಆದ ಅಪಾರ ಬೆಂಬಲಿಗರನ್ನು ಒಳಗೊಂಡಿರುವ ರೊನಾಲ್ಡೊ ಅವರು, ಟ್ವಿಟ್ಟರ್‌ (ಎಕ್ಸ್‌) ನಲ್ಲಿ 113 ಮಿಲಿಯನ್‌ ಫಾಲೋವರ್ಸ್‌, ಫೇಸ್‌ಬುಕ್‌ನಲ್ಲಿ 170 ಮಿಲಿಯನ್‌ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಬರೋಬ್ಬರಿ 638 ಮಿಲಿಯನ್‌ ಫಾಲೋವರ್ಸ್‌ ಹೊಂದಿರುವ ಆಟಗಾರ ಇವರಾಗಿದ್ದಾರೆ.

ಪೊರ್ಜುಗೀಸ್‌ನ ಶ್ರೇಷ್ಠ ಫೂಟ್ಬಾಲ್‌ ಆಟಗಾರ ರೊನಾಲ್ಡೊ ಸದ್ಯ ಅಲ್‌ ನಾಸರ್‌ ಕ್ಲಬ್‌ ಪರವಾಗಿ ಆಡುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

6 mins ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

16 mins ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

18 mins ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

24 mins ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

26 mins ago

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಸಾವು

ಗುಂಡ್ಲುಪೇಟೆ : ತಾಲ್ಲೂಕಿನ ಗರಗನಹಳ್ಳಿ ಗ್ರಾಮದ ಸುಷ್ಮಾ (29) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಗೆ ಇಬ್ಬರು…

30 mins ago