ಕ್ರೀಡೆ

ರೊನಾಲ್ಡೊ ನೂತನ ದಾಖಲೆ: ಯೂಟ್ಯೂಬ್‌ ಆರಂಭಿಸಿದ ಮೂರೇ ದಿನಕ್ಕೆ 54 ಮಿಲಿಯನ್‌ ಚಂದಾದಾರರು!

ವಿಶ್ವ ವಿಖ್ಯಾತ ತಾರೆಗಳು ತಮ್ಮ ಅಭಿಮಾನಿಗಳನ್ನು ಕನೆಕ್ಟ್‌ ಆಗಲು ಬಯಸುವವರು ಜನಪ್ರಿಯ ಸ್ಟ್ರೀಮಿಂಗ್‌ ಅಪ್ಲಕೇಷನ್‌ ಯೂಟ್ಯೂಬ್‌ನಲ್ಲಿ ತಮ್ಮ ಖಾತೆಗಳನ್ನು ತೆರೆಯುತ್ತಾರೆ. ಆ ಮೂಲಕ ಅಭಿಮಾನಿಗಳಿಗೆ ವೇಗವಾಗಿ ಕನೆಕ್ಟ್‌ ಆಗುತ್ತಾರೆ. ಏಕೆಂದರೆ ಯೂಟ್ಯೂಬ್‌ ಜನರೊಂದಿಗೆ ನೇರ ಸಂಪರ್ಕ ಬೆಸೆಯುವ ಬಹಳ ಪ್ರಬಲವಾದ ಸೋಷಿಯಲ್‌ ಮೀಡಿಯಾ ಫ್ಲಾಟ್‌ಫಾರ್ಮ್‌ ಆಗಿದೆ.

ದಿಗ್ಗಜ ಫುಟ್ಬಾಲರ್‌ ಕ್ರಿಸ್ಟಿಯಾನೋ ರೊನಾಲ್ಡೊ ಅವರು ತಮ್ಮ ಹೊಸ ಯೂಟ್ಯೂಬ್‌ ಖಾತೆ ತೆರೆದಿದ್ದಾರೆ. ಅವರು ತಮ್ಮ ಹೊಸ ಖಾತೆಗೆ UR cristiano ಎಂದು ಹೆಸರಿಟ್ಟಿದ್ದಾರೆ.

ಇದೇ ಆಗಸ್ಟ್‌ 28 ರಂದು ಆರಂಭವಾದ ನೂತನ ಚಾನಲ್‌ ಕೇವಲ ಮೂರೇ ದಿನಕ್ಕೆ ಬರೋಬ್ಬರಿ 54 ಮಿಲಿಯನ್‌ ಸಬ್‌ಸ್ಕ್ರೈಬರ್‌ ಗಳಿಸಿಕೊಂಡಿದೆ. ಆ ಮೂಲಕ ಅತೀ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಫಾಲೋವರ್ಸ್‌ ಪಡೆದ ಏಕೈಕ ಚಾನೆಲ್‌ ಎಂಬ ದಾಖಲೆ UR cristiano ಯೂಟ್ಯೂಬ್‌ ಅಕೌಂಟ್‌ ಪಾಲಾಗಿದೆ.

ಈ ಮೂರು ದಿನಗಳಲ್ಲಿ 25 ವೀಡಿಯೋಗಳನ್ನು ತಮ್ಮ ಖಾತೆಯಲ್ಲೊ ರೊನಾಲ್ಡೊ ಹಂಚಿಕೊಂಡಿದ್ದು, ಎಲ್ಲಾ ವಿಡಿಯೋಗಳಿಂದ ಸುಮಾರು 40 ಕೋಟಿ ವೀಕ್ಷಣೆ ಪಡೆದುಕೊಂಡಿವೆ.

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮದೇ ಆದ ಅಪಾರ ಬೆಂಬಲಿಗರನ್ನು ಒಳಗೊಂಡಿರುವ ರೊನಾಲ್ಡೊ ಅವರು, ಟ್ವಿಟ್ಟರ್‌ (ಎಕ್ಸ್‌) ನಲ್ಲಿ 113 ಮಿಲಿಯನ್‌ ಫಾಲೋವರ್ಸ್‌, ಫೇಸ್‌ಬುಕ್‌ನಲ್ಲಿ 170 ಮಿಲಿಯನ್‌ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಬರೋಬ್ಬರಿ 638 ಮಿಲಿಯನ್‌ ಫಾಲೋವರ್ಸ್‌ ಹೊಂದಿರುವ ಆಟಗಾರ ಇವರಾಗಿದ್ದಾರೆ.

ಪೊರ್ಜುಗೀಸ್‌ನ ಶ್ರೇಷ್ಠ ಫೂಟ್ಬಾಲ್‌ ಆಟಗಾರ ರೊನಾಲ್ಡೊ ಸದ್ಯ ಅಲ್‌ ನಾಸರ್‌ ಕ್ಲಬ್‌ ಪರವಾಗಿ ಆಡುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

11 mins ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

41 mins ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

1 hour ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

3 hours ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

3 hours ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

3 hours ago