ಕ್ರೀಡೆ

ರೊನಾಲ್ಡೊ ನೂತನ ದಾಖಲೆ: ಯೂಟ್ಯೂಬ್‌ ಆರಂಭಿಸಿದ ಮೂರೇ ದಿನಕ್ಕೆ 54 ಮಿಲಿಯನ್‌ ಚಂದಾದಾರರು!

ವಿಶ್ವ ವಿಖ್ಯಾತ ತಾರೆಗಳು ತಮ್ಮ ಅಭಿಮಾನಿಗಳನ್ನು ಕನೆಕ್ಟ್‌ ಆಗಲು ಬಯಸುವವರು ಜನಪ್ರಿಯ ಸ್ಟ್ರೀಮಿಂಗ್‌ ಅಪ್ಲಕೇಷನ್‌ ಯೂಟ್ಯೂಬ್‌ನಲ್ಲಿ ತಮ್ಮ ಖಾತೆಗಳನ್ನು ತೆರೆಯುತ್ತಾರೆ. ಆ ಮೂಲಕ ಅಭಿಮಾನಿಗಳಿಗೆ ವೇಗವಾಗಿ ಕನೆಕ್ಟ್‌ ಆಗುತ್ತಾರೆ. ಏಕೆಂದರೆ ಯೂಟ್ಯೂಬ್‌ ಜನರೊಂದಿಗೆ ನೇರ ಸಂಪರ್ಕ ಬೆಸೆಯುವ ಬಹಳ ಪ್ರಬಲವಾದ ಸೋಷಿಯಲ್‌ ಮೀಡಿಯಾ ಫ್ಲಾಟ್‌ಫಾರ್ಮ್‌ ಆಗಿದೆ.

ದಿಗ್ಗಜ ಫುಟ್ಬಾಲರ್‌ ಕ್ರಿಸ್ಟಿಯಾನೋ ರೊನಾಲ್ಡೊ ಅವರು ತಮ್ಮ ಹೊಸ ಯೂಟ್ಯೂಬ್‌ ಖಾತೆ ತೆರೆದಿದ್ದಾರೆ. ಅವರು ತಮ್ಮ ಹೊಸ ಖಾತೆಗೆ UR cristiano ಎಂದು ಹೆಸರಿಟ್ಟಿದ್ದಾರೆ.

ಇದೇ ಆಗಸ್ಟ್‌ 28 ರಂದು ಆರಂಭವಾದ ನೂತನ ಚಾನಲ್‌ ಕೇವಲ ಮೂರೇ ದಿನಕ್ಕೆ ಬರೋಬ್ಬರಿ 54 ಮಿಲಿಯನ್‌ ಸಬ್‌ಸ್ಕ್ರೈಬರ್‌ ಗಳಿಸಿಕೊಂಡಿದೆ. ಆ ಮೂಲಕ ಅತೀ ಕಡಿಮೆ ಸಮಯದಲ್ಲಿ ಅತೀ ಹೆಚ್ಚು ಫಾಲೋವರ್ಸ್‌ ಪಡೆದ ಏಕೈಕ ಚಾನೆಲ್‌ ಎಂಬ ದಾಖಲೆ UR cristiano ಯೂಟ್ಯೂಬ್‌ ಅಕೌಂಟ್‌ ಪಾಲಾಗಿದೆ.

ಈ ಮೂರು ದಿನಗಳಲ್ಲಿ 25 ವೀಡಿಯೋಗಳನ್ನು ತಮ್ಮ ಖಾತೆಯಲ್ಲೊ ರೊನಾಲ್ಡೊ ಹಂಚಿಕೊಂಡಿದ್ದು, ಎಲ್ಲಾ ವಿಡಿಯೋಗಳಿಂದ ಸುಮಾರು 40 ಕೋಟಿ ವೀಕ್ಷಣೆ ಪಡೆದುಕೊಂಡಿವೆ.

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮದೇ ಆದ ಅಪಾರ ಬೆಂಬಲಿಗರನ್ನು ಒಳಗೊಂಡಿರುವ ರೊನಾಲ್ಡೊ ಅವರು, ಟ್ವಿಟ್ಟರ್‌ (ಎಕ್ಸ್‌) ನಲ್ಲಿ 113 ಮಿಲಿಯನ್‌ ಫಾಲೋವರ್ಸ್‌, ಫೇಸ್‌ಬುಕ್‌ನಲ್ಲಿ 170 ಮಿಲಿಯನ್‌ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಬರೋಬ್ಬರಿ 638 ಮಿಲಿಯನ್‌ ಫಾಲೋವರ್ಸ್‌ ಹೊಂದಿರುವ ಆಟಗಾರ ಇವರಾಗಿದ್ದಾರೆ.

ಪೊರ್ಜುಗೀಸ್‌ನ ಶ್ರೇಷ್ಠ ಫೂಟ್ಬಾಲ್‌ ಆಟಗಾರ ರೊನಾಲ್ಡೊ ಸದ್ಯ ಅಲ್‌ ನಾಸರ್‌ ಕ್ಲಬ್‌ ಪರವಾಗಿ ಆಡುತ್ತಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

3 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

6 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

6 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

7 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

7 hours ago