ಕ್ರೀಡೆ

ಅರಬ್ ಕ್ಲಬ್ ಚಾಂಪಿಯನ್ಸ್ ಕಪ್ ಗೆದ್ದ ರೊನಾಲ್ಡೊ ಪಡೆ

ರಿಯಾದ್: ಅವಳಿ ಗೋಲು ಗಳಿಸಿದ ಫುಟ್ಬಾಲ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಅಲ್ ನಸ್ರ್ ತಂಡ ಫೈನಲ್ ನಲ್ಲಿ ಅಲ್ ಹಿಲಾಲ್ ತಂಡವನ್ನು 2-1 ಗೋಲುಗಳ ಅಂತರದಿಂದ ಮಣಿಸಿ ಅರಬ್ ಕ್ಲಬ್ ಚಾಂಪಿಯನ್ಸ್ ಕಪ್ ಜಯಿಸಲು ನೆರವಾಗಿದ್ದಾರೆ.

ಕಳೆದ ವರ್ಷ ಸೌದಿ ಪ್ರೊ ಲೀಗ್ ನಲ್ಲಿ ಅಲ್-ನಸ್ರ್ ರನ್ ಅಪ್ ಗೆ ತೃಪ್ತಿಪಟ್ಟ ಕಾರಣ ರೊನಾಲ್ಡೊ ಟ್ರೋಫಿ ಜಯಿಸುವಲ್ಲಿ ವಿಫಲರಾಗಿದ್ದರು. ಆದರೆ 38ರ ವಯಸ್ಸಿನ ರೊನಾಲ್ಡೊ ಶನಿವಾರ ಕಿಂಗ್ ಫಹದ್ ಇಂಟರ್ನ್ಯಾಶನಲ್ ಸ್ಟೇಡಿಯಮ್ ನಲ್ಲಿ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಹೆಚ್ಚುವರಿ ಸಮಯದಲ್ಲಿ(98ನೇ ನಿಮಿಷ)ಗೋಲು ಗಳಿಸಿ ಅಲ್ ನಸ್ರ್ ತಂಡ ಮೊತ್ತ ಮೊದಲ ಬಾರಿ ಅರಬ್ ಕ್ಲಬ್ ಚಾಂಪಿಯ್ಸನ್ ಕ್ಲಬ್ ಜಯಿಸಲು ಪ್ರಮುಖ ಕೊಡುಗೆ ನೀಡಿದರು.

ಅಲ್ ಹಿಲಾಲ್ ತಂಡ ಆರಂಭದಿಂದಲೂ ಪ್ರಾಬಲ್ಯ ಮೆರೆದಿದ್ದು, ಸ್ಟಾರ್ ಆಟಗಾರರನ್ನು ಒಳಗೊಂಡ ಅಲ್ ನಸ್ರ್ ತಂಡ ಮೊದಲಾರ್ಧದಲ್ಲಿ ಗೋಲು ಗಳಿಸುವ ಹಲವು ಅವಕಾಶಗಳನ್ನು ಪಡೆದಿತ್ತು. ಆದರೆ ಅಲ್ ಹಿಲಾಲ್ ಗೋಲ್ ಕೀಪರ್ ಗೋಲು ನಿರಾಕರಿಸಿದರು. ಉಭಯ ತಂಡಗಳು ತೀವ್ರ ಪೈಪೋಟಿ ನಡೆಸಿದ ಕಾರಣ ಮೊದಲಾರ್ಧದ ಪಂದ್ಯ ಗೋಲುರಹಿತವಾಗಿ ಅಂತ್ಯವಾಯಿತು. 51ನೇ ನಿಮಿಷದಲ್ಲಿ ಹೆಡರ್ನ ಮೂಲಕ ಚೆಂಡನ್ನು ಗೋಲು ಪೆಟ್ಟಿಗೆಗೆ ತಲುಪಿಸಿದ ಬ್ರೆಝಿಲ್ ನ ಮೈಕಲ್ ಅಲ್ ಹಿಲಾಲ್ ತಂಡ 1-0 ಮುನ್ನಡೆ ಪಡೆಯಲು ನೆರವಾದರು.

ತನ್ನ ಖ್ಯಾತಿಗೆ ತಕ್ಕಂತೆ ಆಡಿದ ರೊನಾಲ್ಡೊ 74ನೇ ನಿಮಿಷದಲ್ಲಿ ಗೋಲು ಗಳಿಸಿ ಸ್ಕೋರನ್ನು 1-1ರಿಂದ ಸಮಬಲಗೊಳಿಸಿದರು. ಐದು ಬಾರಿಯ ಬ್ಯಾಲನ್ ಡಿ ಓರ್ ಪ್ರಶಸ್ತಿ ವಿಜೇತ ರೊನಾಲ್ಡೊ ಟೂರ್ನಮೆಂಟ್ ನಲ್ಲಿ ಒಟ್ಟು 6 ಗೋಲುಗಳನ್ನು ಗಳಿಸಿ ಟಾಪ್ ಸ್ಕೋರರ್ ಆಗಿ ಹೊರಹೊಮ್ಮಿದರು.

ನಿಗದಿತ ಸಮಯದಲ್ಲಿ ಸ್ಕೋರ್ 1-1ರಿಂದ ಸಮಬಲಗೊಂಡ ಕಾರಣ ಪಂದ್ಯವು ಹೆಚ್ಚುವರಿ ಸಮಯಕ್ಕೆ ವಿಸ್ತರಣೆಯಾಯಿತು. 98ನೇ ನಿಮಿಷದಲ್ಲಿ ಗೋಲು ಗಳಿಸಿದ ರೊನಾಲ್ಡೊ 2021ರ ಡಿಸೆಂಬರ್ ನಂತರ ಮೊದಲ ಬಾರಿ ಅಲ್ ನಸ್ರ್ ತಂಡ ಅಲ್ ಹಿಲಾಲ್ ತಂಡವನ್ನು ಸೋಲಿಸಲು ಅಮೂಲ್ಯ ಕೊಡುಗೆ ನೀಡಿದರು. ಹೆಚ್ಚುವರಿ ಸಮಯದ ಎರಡನೇ ಅವಧಿಯಲ್ಲಿ ಗಾಯಗೊಂಡಿರುವ ರೊನಾಲ್ಡೊ ಮೈದಾನವನ್ನು ತೊರೆದರು. ಸೌದಿ ಪ್ರೊ ಲೀಗ್ ಆರಂಭವಾಗಲು ಕೇವಲ ಎರಡು ದಿನಗಳಿರುವಾಗ ರೊನಾಲ್ಡೊ ಗಾಯಗೊಂಡಿರುವುದು ಅಲ್ ನಸ್ರ್ ತಂಡಕ್ಕೆ ಹಿನ್ನಡೆಯಾಗಿದೆ.

2022-23ರ ಋತುವಿನಲ್ಲಿ ಸೌದಿ ಪ್ರೊ ಲೀಗ್ ನಲ್ಲಿ ಅಲ್ ನಸ್ರ್ 2ನೇ ಸ್ಥಾನ ಪಡೆದಿದ್ದರೆ, ಅಲ್ ಹಿಲಾಲ್ ಮೂರನೇ ಸ್ಥಾನ ಪಡೆದಿತ್ತು.

ಅರಬ್ ಕ್ಲಬ್ ಚಾಂಪಿಯ್ಸನ್ ಕ್ಲಬ್ ಪಂದ್ಯಾವಳಿಯನ್ನು ಪ್ರದೇಶದ ಅಗ್ರ ಅರಬ್ ಕ್ಲಬ್ ಗಳು ಆಡುತ್ತವೆ. ಸೌದಿ ಅರೇಬಿಯಾ, ಖತರ್, ಯುನೈಟೆಡ್ ಅರಬ್ ಎಮಿರೇಟ್ಸ್, ಇರಾಕ್, ಮೊರಾಕ್ಕೊ, ಟುನೀಶಿಯಾ ಹಾಗೂ ಅಲ್ಜೀರಿಯಾದ ತಂಡಗಳು ಇದರಲ್ಲಿ ಒಳಗೊಂಡಿವೆ.

andolanait

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

12 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

13 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

13 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

18 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

19 hours ago