ಕ್ರೀಡೆ

ರಾಯಲ್ ಚಾಲೆಂಜರ್ಸ್‌ ಬ್ಯಾಂಗಳೋರ್‌ ಇನ್ಮುಂದೆ ʼರಾಯಲ್‌ ಚಾಲೆಂಜರ್ಸ್‌ ಬೆಂಗಳೂರುʼ?

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ ಹೊಸತನವನ್ನು ತರುತ್ತಿವೆ.

ಇನ್ನು ಐಪಿಎಲ್‌ನಲ್ಲಿ ಅತಿದೊಡ್ಡ ಅಭಿಮಾನಿ ಬಳಗವಿರುವ ಆರ್‌ಸಿಬಿ ತಂಡ ಈ ಬಾರಿಯೂ ಸಹ ತನ್ನ ಅನ್‌ಬಾಕ್ಸ್‌ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಅನ್‌ಬಾಕ್ಸ್‌ ಈವೆಂಟ್‌ನಲ್ಲಿ ಏನೆಲ್ಲಾ ಬದಲಾವಣೆಗಳನ್ನು ತರಲಿದೆ ಹಾಗೂ ಏನೆಲ್ಲಾ ಹೊಸತನ ಬರಲಿದೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಹೀಗಿರುವಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಅನ್‌ಬಾಕ್ಸ್‌ ಕಾರ್ಯಕ್ರಮಕ್ಕೂ ಮುನ್ನವೇ ವಿಡಿಯೊ ತುಣುಕೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಬಾರಿ ತನ್ನ ಹೆಸರಿನಲ್ಲಿರುವ ಬ್ಯಾಂಗ್ಳೋರ್‌ ಅನ್ನು ʼಬೆಂಗಳೂರುʼ ಎಂದು ಬದಲಿಸುವ ಮುನ್ಸೂಚನೆಯನ್ನು ನೀಡಿದೆ. ಹೌದು, ರಿಷಬ್‌ ಶೆಟ್ಟಿ ಈ ಪ್ರೊಮೊದಲ್ಲಿ ಕಾಣಿಸಿಕೊಂಡಿದ್ದು, ಬ್ಯಾಂಗ್ಳೋರ್‌ ಎಂಬ ಹೆಸರಿರುವ ಕೋಣವನ್ನು ಬೇಡ ಎಂದು ಕಳುಹಿಸಿ ʼಅರ್ಥ ಆಯ್ತಾʼ ಎಂದು ಹೇಳುವ ಮೂಲಕ ಹೆಸರು ಬದಲಾವಣೆಯಾಗಲಿದೆ ಎಂಬ ಸುಳಿವು ನೀಡಿದ್ದಾರೆ. ಈ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಅಭಿಮಾನಿಗಳ ಬಹು ದಿನಗಳ ಕನಸು ನನಸಾಗಲಿದೆ.

ಲೋಕೇಶ್‌ ಕಾಯರ್ಗ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಇರುವ ನಾನು ಪ್ರಸ್ತುತ, ಆಂದೋಲನ ಪತ್ರಿಕೆಯಲ್ಲಿ ಎಡಿಟೋರಿಯಲ್‌ ಚೀಫ್‌ ಆಗಿ ಸೇವೆ ಸಲ್ಲಿಸುತ್ತಿದ್ದೇನೆ. 1993-94ರಲ್ಲಿ ಮಂಗಳೂರು ವಿವಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ , 2005ರಲ್ಲಿ ಬಿಬಿಸಿ ಪ್ರಾಯೋಜಿತ ಅಡ್ವಾನ್ಸ್ಡ್ ಜರ್ನಲಿಸಂ ಕೋರ್ಸ್ ಪೂರೈಸಿರುವ ನಾನು ಕೆನರಾ ಟೈಮ್ಸ್ ಪತ್ರಿಕಾ ಬಳಗ, ಸಂಯುಕ್ತ ಕರ್ನಾಟಕ,ಜನವಾಹಿನಿ, ವಿಜಯಕರ್ನಾಟಕ, ಪ್ರಜಾನುಡಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಮೂರು ದಶಕಗಳ ಪತ್ರಿಕಾ ವೃತ್ತಿಯಲ್ಲಿ ಉಪಸಂಪಾದಕ/ ವರದಿಗಾರನಿಂದ ಹಿಡಿದು ಸಂಪಾದಕ ಸ್ಥಾನದವರೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಮೂರು ಪ್ರಮುಖ ಪತ್ರಿಕೆಗಳ ಆರಂಭಿಕ ಬಳಗದಲ್ಲಿದ್ದು ದುಡಿದ ಅನುಭವ. ಅಭ್ಯುದಯ ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ. ರಾಜಕೀಯ, ಸಿನಿಮಾ, ಕ್ರೀಡೆ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಮಯ ವಿಷಯಗಳಲ್ಲಿ ಒಲವು. ಕೃಷಿ, ಪ್ರವಾಸ, ಫೋಟೋಗ್ರಫಿ ಇಷ್ಟದ ಕೆಲಸ.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

49 mins ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

17 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

18 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

19 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago