ಕ್ರೀಡೆ

ರಾಯಲ್ ಚಾಲೆಂಜರ್ಸ್‌ ಬ್ಯಾಂಗಳೋರ್‌ ಇನ್ಮುಂದೆ ʼರಾಯಲ್‌ ಚಾಲೆಂಜರ್ಸ್‌ ಬೆಂಗಳೂರುʼ?

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ ಹೊಸತನವನ್ನು ತರುತ್ತಿವೆ.

ಇನ್ನು ಐಪಿಎಲ್‌ನಲ್ಲಿ ಅತಿದೊಡ್ಡ ಅಭಿಮಾನಿ ಬಳಗವಿರುವ ಆರ್‌ಸಿಬಿ ತಂಡ ಈ ಬಾರಿಯೂ ಸಹ ತನ್ನ ಅನ್‌ಬಾಕ್ಸ್‌ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಅನ್‌ಬಾಕ್ಸ್‌ ಈವೆಂಟ್‌ನಲ್ಲಿ ಏನೆಲ್ಲಾ ಬದಲಾವಣೆಗಳನ್ನು ತರಲಿದೆ ಹಾಗೂ ಏನೆಲ್ಲಾ ಹೊಸತನ ಬರಲಿದೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಹೀಗಿರುವಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಅನ್‌ಬಾಕ್ಸ್‌ ಕಾರ್ಯಕ್ರಮಕ್ಕೂ ಮುನ್ನವೇ ವಿಡಿಯೊ ತುಣುಕೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಬಾರಿ ತನ್ನ ಹೆಸರಿನಲ್ಲಿರುವ ಬ್ಯಾಂಗ್ಳೋರ್‌ ಅನ್ನು ʼಬೆಂಗಳೂರುʼ ಎಂದು ಬದಲಿಸುವ ಮುನ್ಸೂಚನೆಯನ್ನು ನೀಡಿದೆ. ಹೌದು, ರಿಷಬ್‌ ಶೆಟ್ಟಿ ಈ ಪ್ರೊಮೊದಲ್ಲಿ ಕಾಣಿಸಿಕೊಂಡಿದ್ದು, ಬ್ಯಾಂಗ್ಳೋರ್‌ ಎಂಬ ಹೆಸರಿರುವ ಕೋಣವನ್ನು ಬೇಡ ಎಂದು ಕಳುಹಿಸಿ ʼಅರ್ಥ ಆಯ್ತಾʼ ಎಂದು ಹೇಳುವ ಮೂಲಕ ಹೆಸರು ಬದಲಾವಣೆಯಾಗಲಿದೆ ಎಂಬ ಸುಳಿವು ನೀಡಿದ್ದಾರೆ. ಈ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಅಭಿಮಾನಿಗಳ ಬಹು ದಿನಗಳ ಕನಸು ನನಸಾಗಲಿದೆ.

ಲೋಕೇಶ್‌ ಕಾಯರ್ಗ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಇರುವ ನಾನು ಪ್ರಸ್ತುತ, ಆಂದೋಲನ ಪತ್ರಿಕೆಯಲ್ಲಿ ಎಡಿಟೋರಿಯಲ್‌ ಚೀಫ್‌ ಆಗಿ ಸೇವೆ ಸಲ್ಲಿಸುತ್ತಿದ್ದೇನೆ. 1993-94ರಲ್ಲಿ ಮಂಗಳೂರು ವಿವಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ , 2005ರಲ್ಲಿ ಬಿಬಿಸಿ ಪ್ರಾಯೋಜಿತ ಅಡ್ವಾನ್ಸ್ಡ್ ಜರ್ನಲಿಸಂ ಕೋರ್ಸ್ ಪೂರೈಸಿರುವ ನಾನು ಕೆನರಾ ಟೈಮ್ಸ್ ಪತ್ರಿಕಾ ಬಳಗ, ಸಂಯುಕ್ತ ಕರ್ನಾಟಕ,ಜನವಾಹಿನಿ, ವಿಜಯಕರ್ನಾಟಕ, ಪ್ರಜಾನುಡಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಮೂರು ದಶಕಗಳ ಪತ್ರಿಕಾ ವೃತ್ತಿಯಲ್ಲಿ ಉಪಸಂಪಾದಕ/ ವರದಿಗಾರನಿಂದ ಹಿಡಿದು ಸಂಪಾದಕ ಸ್ಥಾನದವರೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಮೂರು ಪ್ರಮುಖ ಪತ್ರಿಕೆಗಳ ಆರಂಭಿಕ ಬಳಗದಲ್ಲಿದ್ದು ದುಡಿದ ಅನುಭವ. ಅಭ್ಯುದಯ ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ. ರಾಜಕೀಯ, ಸಿನಿಮಾ, ಕ್ರೀಡೆ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಮಯ ವಿಷಯಗಳಲ್ಲಿ ಒಲವು. ಕೃಷಿ, ಪ್ರವಾಸ, ಫೋಟೋಗ್ರಫಿ ಇಷ್ಟದ ಕೆಲಸ.

Recent Posts

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

38 mins ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

2 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

2 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

2 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

3 hours ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

3 hours ago