ಕ್ರೀಡೆ

ರಾಯಲ್ ಚಾಲೆಂಜರ್ಸ್‌ ಬ್ಯಾಂಗಳೋರ್‌ ಇನ್ಮುಂದೆ ʼರಾಯಲ್‌ ಚಾಲೆಂಜರ್ಸ್‌ ಬೆಂಗಳೂರುʼ?

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ ಹೊಸತನವನ್ನು ತರುತ್ತಿವೆ.

ಇನ್ನು ಐಪಿಎಲ್‌ನಲ್ಲಿ ಅತಿದೊಡ್ಡ ಅಭಿಮಾನಿ ಬಳಗವಿರುವ ಆರ್‌ಸಿಬಿ ತಂಡ ಈ ಬಾರಿಯೂ ಸಹ ತನ್ನ ಅನ್‌ಬಾಕ್ಸ್‌ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಅನ್‌ಬಾಕ್ಸ್‌ ಈವೆಂಟ್‌ನಲ್ಲಿ ಏನೆಲ್ಲಾ ಬದಲಾವಣೆಗಳನ್ನು ತರಲಿದೆ ಹಾಗೂ ಏನೆಲ್ಲಾ ಹೊಸತನ ಬರಲಿದೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಹೀಗಿರುವಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಅನ್‌ಬಾಕ್ಸ್‌ ಕಾರ್ಯಕ್ರಮಕ್ಕೂ ಮುನ್ನವೇ ವಿಡಿಯೊ ತುಣುಕೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಬಾರಿ ತನ್ನ ಹೆಸರಿನಲ್ಲಿರುವ ಬ್ಯಾಂಗ್ಳೋರ್‌ ಅನ್ನು ʼಬೆಂಗಳೂರುʼ ಎಂದು ಬದಲಿಸುವ ಮುನ್ಸೂಚನೆಯನ್ನು ನೀಡಿದೆ. ಹೌದು, ರಿಷಬ್‌ ಶೆಟ್ಟಿ ಈ ಪ್ರೊಮೊದಲ್ಲಿ ಕಾಣಿಸಿಕೊಂಡಿದ್ದು, ಬ್ಯಾಂಗ್ಳೋರ್‌ ಎಂಬ ಹೆಸರಿರುವ ಕೋಣವನ್ನು ಬೇಡ ಎಂದು ಕಳುಹಿಸಿ ʼಅರ್ಥ ಆಯ್ತಾʼ ಎಂದು ಹೇಳುವ ಮೂಲಕ ಹೆಸರು ಬದಲಾವಣೆಯಾಗಲಿದೆ ಎಂಬ ಸುಳಿವು ನೀಡಿದ್ದಾರೆ. ಈ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಅಭಿಮಾನಿಗಳ ಬಹು ದಿನಗಳ ಕನಸು ನನಸಾಗಲಿದೆ.

ಲೋಕೇಶ್‌ ಕಾಯರ್ಗ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಇರುವ ನಾನು ಪ್ರಸ್ತುತ, ಆಂದೋಲನ ಪತ್ರಿಕೆಯಲ್ಲಿ ಎಡಿಟೋರಿಯಲ್‌ ಚೀಫ್‌ ಆಗಿ ಸೇವೆ ಸಲ್ಲಿಸುತ್ತಿದ್ದೇನೆ. 1993-94ರಲ್ಲಿ ಮಂಗಳೂರು ವಿವಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ , 2005ರಲ್ಲಿ ಬಿಬಿಸಿ ಪ್ರಾಯೋಜಿತ ಅಡ್ವಾನ್ಸ್ಡ್ ಜರ್ನಲಿಸಂ ಕೋರ್ಸ್ ಪೂರೈಸಿರುವ ನಾನು ಕೆನರಾ ಟೈಮ್ಸ್ ಪತ್ರಿಕಾ ಬಳಗ, ಸಂಯುಕ್ತ ಕರ್ನಾಟಕ,ಜನವಾಹಿನಿ, ವಿಜಯಕರ್ನಾಟಕ, ಪ್ರಜಾನುಡಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಮೂರು ದಶಕಗಳ ಪತ್ರಿಕಾ ವೃತ್ತಿಯಲ್ಲಿ ಉಪಸಂಪಾದಕ/ ವರದಿಗಾರನಿಂದ ಹಿಡಿದು ಸಂಪಾದಕ ಸ್ಥಾನದವರೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಮೂರು ಪ್ರಮುಖ ಪತ್ರಿಕೆಗಳ ಆರಂಭಿಕ ಬಳಗದಲ್ಲಿದ್ದು ದುಡಿದ ಅನುಭವ. ಅಭ್ಯುದಯ ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ. ರಾಜಕೀಯ, ಸಿನಿಮಾ, ಕ್ರೀಡೆ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಮಯ ವಿಷಯಗಳಲ್ಲಿ ಒಲವು. ಕೃಷಿ, ಪ್ರವಾಸ, ಫೋಟೋಗ್ರಫಿ ಇಷ್ಟದ ಕೆಲಸ.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

5 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

5 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

6 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

6 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

7 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

7 hours ago