ಕ್ರೀಡೆ

ರಾಯಲ್ ಚಾಲೆಂಜರ್ಸ್‌ ಬ್ಯಾಂಗಳೋರ್‌ ಇನ್ಮುಂದೆ ʼರಾಯಲ್‌ ಚಾಲೆಂಜರ್ಸ್‌ ಬೆಂಗಳೂರುʼ?

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ ಹೊಸತನವನ್ನು ತರುತ್ತಿವೆ.

ಇನ್ನು ಐಪಿಎಲ್‌ನಲ್ಲಿ ಅತಿದೊಡ್ಡ ಅಭಿಮಾನಿ ಬಳಗವಿರುವ ಆರ್‌ಸಿಬಿ ತಂಡ ಈ ಬಾರಿಯೂ ಸಹ ತನ್ನ ಅನ್‌ಬಾಕ್ಸ್‌ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಅನ್‌ಬಾಕ್ಸ್‌ ಈವೆಂಟ್‌ನಲ್ಲಿ ಏನೆಲ್ಲಾ ಬದಲಾವಣೆಗಳನ್ನು ತರಲಿದೆ ಹಾಗೂ ಏನೆಲ್ಲಾ ಹೊಸತನ ಬರಲಿದೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಹೀಗಿರುವಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಅನ್‌ಬಾಕ್ಸ್‌ ಕಾರ್ಯಕ್ರಮಕ್ಕೂ ಮುನ್ನವೇ ವಿಡಿಯೊ ತುಣುಕೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಬಾರಿ ತನ್ನ ಹೆಸರಿನಲ್ಲಿರುವ ಬ್ಯಾಂಗ್ಳೋರ್‌ ಅನ್ನು ʼಬೆಂಗಳೂರುʼ ಎಂದು ಬದಲಿಸುವ ಮುನ್ಸೂಚನೆಯನ್ನು ನೀಡಿದೆ. ಹೌದು, ರಿಷಬ್‌ ಶೆಟ್ಟಿ ಈ ಪ್ರೊಮೊದಲ್ಲಿ ಕಾಣಿಸಿಕೊಂಡಿದ್ದು, ಬ್ಯಾಂಗ್ಳೋರ್‌ ಎಂಬ ಹೆಸರಿರುವ ಕೋಣವನ್ನು ಬೇಡ ಎಂದು ಕಳುಹಿಸಿ ʼಅರ್ಥ ಆಯ್ತಾʼ ಎಂದು ಹೇಳುವ ಮೂಲಕ ಹೆಸರು ಬದಲಾವಣೆಯಾಗಲಿದೆ ಎಂಬ ಸುಳಿವು ನೀಡಿದ್ದಾರೆ. ಈ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಅಭಿಮಾನಿಗಳ ಬಹು ದಿನಗಳ ಕನಸು ನನಸಾಗಲಿದೆ.

ಲೋಕೇಶ್‌ ಕಾಯರ್ಗ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಇರುವ ನಾನು ಪ್ರಸ್ತುತ, ಆಂದೋಲನ ಪತ್ರಿಕೆಯಲ್ಲಿ ಎಡಿಟೋರಿಯಲ್‌ ಚೀಫ್‌ ಆಗಿ ಸೇವೆ ಸಲ್ಲಿಸುತ್ತಿದ್ದೇನೆ. 1993-94ರಲ್ಲಿ ಮಂಗಳೂರು ವಿವಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ , 2005ರಲ್ಲಿ ಬಿಬಿಸಿ ಪ್ರಾಯೋಜಿತ ಅಡ್ವಾನ್ಸ್ಡ್ ಜರ್ನಲಿಸಂ ಕೋರ್ಸ್ ಪೂರೈಸಿರುವ ನಾನು ಕೆನರಾ ಟೈಮ್ಸ್ ಪತ್ರಿಕಾ ಬಳಗ, ಸಂಯುಕ್ತ ಕರ್ನಾಟಕ,ಜನವಾಹಿನಿ, ವಿಜಯಕರ್ನಾಟಕ, ಪ್ರಜಾನುಡಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಮೂರು ದಶಕಗಳ ಪತ್ರಿಕಾ ವೃತ್ತಿಯಲ್ಲಿ ಉಪಸಂಪಾದಕ/ ವರದಿಗಾರನಿಂದ ಹಿಡಿದು ಸಂಪಾದಕ ಸ್ಥಾನದವರೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಮೂರು ಪ್ರಮುಖ ಪತ್ರಿಕೆಗಳ ಆರಂಭಿಕ ಬಳಗದಲ್ಲಿದ್ದು ದುಡಿದ ಅನುಭವ. ಅಭ್ಯುದಯ ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ. ರಾಜಕೀಯ, ಸಿನಿಮಾ, ಕ್ರೀಡೆ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಮಯ ವಿಷಯಗಳಲ್ಲಿ ಒಲವು. ಕೃಷಿ, ಪ್ರವಾಸ, ಫೋಟೋಗ್ರಫಿ ಇಷ್ಟದ ಕೆಲಸ.

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

4 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

4 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

9 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

9 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

9 hours ago