ಕ್ರೀಡೆ

ರಾಯಲ್ ಚಾಲೆಂಜರ್ಸ್‌ ಬ್ಯಾಂಗಳೋರ್‌ ಇನ್ಮುಂದೆ ʼರಾಯಲ್‌ ಚಾಲೆಂಜರ್ಸ್‌ ಬೆಂಗಳೂರುʼ?

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ ಹೊಸತನವನ್ನು ತರುತ್ತಿವೆ.

ಇನ್ನು ಐಪಿಎಲ್‌ನಲ್ಲಿ ಅತಿದೊಡ್ಡ ಅಭಿಮಾನಿ ಬಳಗವಿರುವ ಆರ್‌ಸಿಬಿ ತಂಡ ಈ ಬಾರಿಯೂ ಸಹ ತನ್ನ ಅನ್‌ಬಾಕ್ಸ್‌ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಅನ್‌ಬಾಕ್ಸ್‌ ಈವೆಂಟ್‌ನಲ್ಲಿ ಏನೆಲ್ಲಾ ಬದಲಾವಣೆಗಳನ್ನು ತರಲಿದೆ ಹಾಗೂ ಏನೆಲ್ಲಾ ಹೊಸತನ ಬರಲಿದೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.

ಹೀಗಿರುವಾಗಲೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿ ಅನ್‌ಬಾಕ್ಸ್‌ ಕಾರ್ಯಕ್ರಮಕ್ಕೂ ಮುನ್ನವೇ ವಿಡಿಯೊ ತುಣುಕೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಬಾರಿ ತನ್ನ ಹೆಸರಿನಲ್ಲಿರುವ ಬ್ಯಾಂಗ್ಳೋರ್‌ ಅನ್ನು ʼಬೆಂಗಳೂರುʼ ಎಂದು ಬದಲಿಸುವ ಮುನ್ಸೂಚನೆಯನ್ನು ನೀಡಿದೆ. ಹೌದು, ರಿಷಬ್‌ ಶೆಟ್ಟಿ ಈ ಪ್ರೊಮೊದಲ್ಲಿ ಕಾಣಿಸಿಕೊಂಡಿದ್ದು, ಬ್ಯಾಂಗ್ಳೋರ್‌ ಎಂಬ ಹೆಸರಿರುವ ಕೋಣವನ್ನು ಬೇಡ ಎಂದು ಕಳುಹಿಸಿ ʼಅರ್ಥ ಆಯ್ತಾʼ ಎಂದು ಹೇಳುವ ಮೂಲಕ ಹೆಸರು ಬದಲಾವಣೆಯಾಗಲಿದೆ ಎಂಬ ಸುಳಿವು ನೀಡಿದ್ದಾರೆ. ಈ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಅಭಿಮಾನಿಗಳ ಬಹು ದಿನಗಳ ಕನಸು ನನಸಾಗಲಿದೆ.

ಲೋಕೇಶ್‌ ಕಾಯರ್ಗ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಇರುವ ನಾನು ಪ್ರಸ್ತುತ, ಆಂದೋಲನ ಪತ್ರಿಕೆಯಲ್ಲಿ ಎಡಿಟೋರಿಯಲ್‌ ಚೀಫ್‌ ಆಗಿ ಸೇವೆ ಸಲ್ಲಿಸುತ್ತಿದ್ದೇನೆ. 1993-94ರಲ್ಲಿ ಮಂಗಳೂರು ವಿವಿಯಿಂದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ , 2005ರಲ್ಲಿ ಬಿಬಿಸಿ ಪ್ರಾಯೋಜಿತ ಅಡ್ವಾನ್ಸ್ಡ್ ಜರ್ನಲಿಸಂ ಕೋರ್ಸ್ ಪೂರೈಸಿರುವ ನಾನು ಕೆನರಾ ಟೈಮ್ಸ್ ಪತ್ರಿಕಾ ಬಳಗ, ಸಂಯುಕ್ತ ಕರ್ನಾಟಕ,ಜನವಾಹಿನಿ, ವಿಜಯಕರ್ನಾಟಕ, ಪ್ರಜಾನುಡಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದೇನೆ. ಮೂರು ದಶಕಗಳ ಪತ್ರಿಕಾ ವೃತ್ತಿಯಲ್ಲಿ ಉಪಸಂಪಾದಕ/ ವರದಿಗಾರನಿಂದ ಹಿಡಿದು ಸಂಪಾದಕ ಸ್ಥಾನದವರೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಮೂರು ಪ್ರಮುಖ ಪತ್ರಿಕೆಗಳ ಆರಂಭಿಕ ಬಳಗದಲ್ಲಿದ್ದು ದುಡಿದ ಅನುಭವ. ಅಭ್ಯುದಯ ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ. ರಾಜಕೀಯ, ಸಿನಿಮಾ, ಕ್ರೀಡೆ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಮಯ ವಿಷಯಗಳಲ್ಲಿ ಒಲವು. ಕೃಷಿ, ಪ್ರವಾಸ, ಫೋಟೋಗ್ರಫಿ ಇಷ್ಟದ ಕೆಲಸ.

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

7 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

8 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

8 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

9 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

9 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

10 hours ago