ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ ಹೊಸತನವನ್ನು ತರುತ್ತಿವೆ.
ಇನ್ನು ಐಪಿಎಲ್ನಲ್ಲಿ ಅತಿದೊಡ್ಡ ಅಭಿಮಾನಿ ಬಳಗವಿರುವ ಆರ್ಸಿಬಿ ತಂಡ ಈ ಬಾರಿಯೂ ಸಹ ತನ್ನ ಅನ್ಬಾಕ್ಸ್ ಕಾರ್ಯಕ್ರಮವನ್ನು ಏರ್ಪಡಿಸಿದೆ. ಈ ಅನ್ಬಾಕ್ಸ್ ಈವೆಂಟ್ನಲ್ಲಿ ಏನೆಲ್ಲಾ ಬದಲಾವಣೆಗಳನ್ನು ತರಲಿದೆ ಹಾಗೂ ಏನೆಲ್ಲಾ ಹೊಸತನ ಬರಲಿದೆ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.
ಹೀಗಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅನ್ಬಾಕ್ಸ್ ಕಾರ್ಯಕ್ರಮಕ್ಕೂ ಮುನ್ನವೇ ವಿಡಿಯೊ ತುಣುಕೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಬಾರಿ ತನ್ನ ಹೆಸರಿನಲ್ಲಿರುವ ಬ್ಯಾಂಗ್ಳೋರ್ ಅನ್ನು ʼಬೆಂಗಳೂರುʼ ಎಂದು ಬದಲಿಸುವ ಮುನ್ಸೂಚನೆಯನ್ನು ನೀಡಿದೆ. ಹೌದು, ರಿಷಬ್ ಶೆಟ್ಟಿ ಈ ಪ್ರೊಮೊದಲ್ಲಿ ಕಾಣಿಸಿಕೊಂಡಿದ್ದು, ಬ್ಯಾಂಗ್ಳೋರ್ ಎಂಬ ಹೆಸರಿರುವ ಕೋಣವನ್ನು ಬೇಡ ಎಂದು ಕಳುಹಿಸಿ ʼಅರ್ಥ ಆಯ್ತಾʼ ಎಂದು ಹೇಳುವ ಮೂಲಕ ಹೆಸರು ಬದಲಾವಣೆಯಾಗಲಿದೆ ಎಂಬ ಸುಳಿವು ನೀಡಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳ ಬಹು ದಿನಗಳ ಕನಸು ನನಸಾಗಲಿದೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…