ಕ್ರೀಡೆ

IPL 2024: ಗೆಲುವಿನ ನಾಗಾಲೋಟ ಮುಂದುವರೆಸಿದ ಆರ್‌ಆರ್‌: ಮುಂಬೈಗೆ ಮತ್ತೊಂದು ಸೋಲು!

ಜೈಪುರ್‌: ಇಲ್ಲಿನ ಸವಾಯಿ ಮಾನ್‌ಸಿಂಗ್‌ ಮೈದಾನದಲ್ಲಿ ನಡೆದ ಐಪಿಎಲ್‌ ಸಿಸನ್‌ 17ರ 38 ನೇ ಲೀಗ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 9 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಮುಂಬೈ ಇಂಡಿಯನ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 179ರನ್‌ ಗಳಸಿ 180 ರನ್‌ಗಳ ಗುರಿ ನೀಡಿತು. ತವರಿನಂಗಳದಲ್ಲಿ ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ ತಂಡ 18.4 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 183 ರನ್‌ ಕಲೆಹಾಕಿ ಜಯದ ನಗೆ ಬೀರಿತು.

ಮುಂಬೈ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ತಂಡಕ್ಕೆ ಆರ್‌ಆರ್‌ ಬೌಲರ್‌ ಸಂದೀಪ್‌ ಶರ್ಮಾ ಕಾಡಿದರು. ಪವರ್‌ ಪ್ಲೇ ನಲ್ಲೇ ಮುಂಬೈ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡರು. ಇಶಾನ್‌ ಕಿಸಾನ್‌ ಶೂನ್ಯ ಸುತ್ತಿ ಔಟಾದರೆ. ಮಾಜಿ ನಾಯಕ ರೋಹಿತ್‌ 6, ಸೂರ್ಯ ಕುಮಾರ್‌ ಯಾದವ್‌ 10 ರನ್‌ ಗಳಿಸಿ ನಿರ್ಗಮಿಸಿದರು.

ಬಳಿಕ ಜೊತೆಯಾದ ತಿಲಕ್‌ ವರ್ಮಾ ಹಾಗೂ ವಧೇರಾ ತಂಡಕ್ಕೆ ಭದ್ರ ಬುನಾದಿ ಹಾಕಿದರು ಈ ಇಬ್ಬರು ಕ್ರಮವಾಗಿ 65 (45 ಎಸೆತ, 5*4, 3*6) ಹಾಗೂ 49(24) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಉಳಿದಂತೆ ನಬಿ 23, ನಾಯಕ ಹಾರ್ದಿಕ್‌ ಪಾಂಡ್ಯ 10, ಟಿಮ್‌ ಡೇವಿಡ್‌ 3, ಕಾಟ್ಜಿ ಶೂನ್ಯ, ಚಾವ್ಲಾ ಹಾಗೂ ಬುಮ್ರಾ ಔಟಾಗದೇ ಕ್ರಮವಾಗಿ 1, 2 ರನ್‌ ಗಳಿಸಿದರು.

ರಾಜಸ್ಥಾನ್‌ ಪರ ಶಿಸ್ತುಬದ್ಧ ಬೌಲಿಂಗ್‌ ಮಾಡಿದ ಸಂದೀಪ್‌ ಶರ್ಮಾ 4ಓವರ್‌ ಬೌಲಿಂಗ್‌ ಮಾಡಿ 18 ರನ್‌ ನೀಡಿ ಪ್ರಮುಖ 5 ವಿಕೆಟ್‌ ಕಬಳಿಸಿ ಮಿಂಚಿದರು. ಟ್ರೆಂಟ್‌ ಬೌಲ್ಟ್‌ 2, ಚಾಹಲ್‌ ಮತ್ತು ಆವೇಶ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ರಾಜಸ್ಥಾನ್‌ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಆರ್‌ಗೆ ಉತ್ತಮ ಆರಂಭ ಕಂಡುಬಂದಿತು. ಜೋಸ್‌ ಬಟ್ಲರ್‌ ಹಾಗೂ ಜೈಸ್ವಾಲ್‌ ಪವರ್‌ ಪ್ಲೇ ನಲ್ಲಿ 61ರನ್‌ ಗಳ ಜತೆಯಾಟ ನೀಡಿದರು. ಬಟ್ಲರ್‌ 35(25) ಗಳಿಸಿದರೇ, ಜೈಸ್ವಾಲ್‌ ಹಾಗೂ ನಾಯಕ ಸಂಜು ಸ್ಯಾಮ್ಸನ್‌ ಈ ಇಬ್ಬರು ಜತೆಯಾಗಿ ಮುಂಬೈ ಬೌಲರ್‌ಗಳ ಬೆಂಡೆತ್ತಿದರು. ಈ ಇಬ್ಬರು ವಿಕೆಟ್‌ ನೀಡದೇ ಮುಂಬೈ ನೀಡಿದ್ದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿ ಗೆಲುವಿನ ನಗೆ ಬೀರಿದರು.

ಇತ್ತ ಜೈಸ್ವಾಲ್‌ ಮುಂಬೈ ವಿರುದ್ಧ ಐಪಿಎಲ್‌ನಲ್ಲಿ ಎರಡನೇ ಶತಕ ದಾಖಲಿಸಿದರು. ಇವರು 60 ಎಸೆತಗಳಲ್ಲಿ 9ಬೌಂಡರಿ ಹಾಗೂ 7ಸಿಕ್ಸರ್‌ ಸಹಿತ 104 ಭರ್ಜರಿ ಶತಕ ಬಾರಿಸಿ ಮಿಂಚಿದರು. ಜೈಸ್ವಾಲ್‌ಗೆ ಸಾಥ್‌ ನೀಡಿದ ನಾಯಕ ಸಂಜು 38(28) ರನ್‌ಗಳಿಸಿ ಔಟಾಗದೇ ಉಳಿದು ಪಂದ್ಯ ಮುಗಿಸಿದರು.

ಮುಂಬೈ ಪರ ಪಿಯೂಷ್‌ ಚಾವ್ಲಾ ಒಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

53 mins ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

1 hour ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

1 hour ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

2 hours ago

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…

2 hours ago