ಕ್ರೀಡೆ

IPL 2024: ಗೆಲುವಿನ ನಾಗಾಲೋಟ ಮುಂದುವರೆಸಿದ ಆರ್‌ಆರ್‌: ಮುಂಬೈಗೆ ಮತ್ತೊಂದು ಸೋಲು!

ಜೈಪುರ್‌: ಇಲ್ಲಿನ ಸವಾಯಿ ಮಾನ್‌ಸಿಂಗ್‌ ಮೈದಾನದಲ್ಲಿ ನಡೆದ ಐಪಿಎಲ್‌ ಸಿಸನ್‌ 17ರ 38 ನೇ ಲೀಗ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 9 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಮುಂಬೈ ಇಂಡಿಯನ್ಸ್‌ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 179ರನ್‌ ಗಳಸಿ 180 ರನ್‌ಗಳ ಗುರಿ ನೀಡಿತು. ತವರಿನಂಗಳದಲ್ಲಿ ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ ತಂಡ 18.4 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 183 ರನ್‌ ಕಲೆಹಾಕಿ ಜಯದ ನಗೆ ಬೀರಿತು.

ಮುಂಬೈ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ತಂಡಕ್ಕೆ ಆರ್‌ಆರ್‌ ಬೌಲರ್‌ ಸಂದೀಪ್‌ ಶರ್ಮಾ ಕಾಡಿದರು. ಪವರ್‌ ಪ್ಲೇ ನಲ್ಲೇ ಮುಂಬೈ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡರು. ಇಶಾನ್‌ ಕಿಸಾನ್‌ ಶೂನ್ಯ ಸುತ್ತಿ ಔಟಾದರೆ. ಮಾಜಿ ನಾಯಕ ರೋಹಿತ್‌ 6, ಸೂರ್ಯ ಕುಮಾರ್‌ ಯಾದವ್‌ 10 ರನ್‌ ಗಳಿಸಿ ನಿರ್ಗಮಿಸಿದರು.

ಬಳಿಕ ಜೊತೆಯಾದ ತಿಲಕ್‌ ವರ್ಮಾ ಹಾಗೂ ವಧೇರಾ ತಂಡಕ್ಕೆ ಭದ್ರ ಬುನಾದಿ ಹಾಕಿದರು ಈ ಇಬ್ಬರು ಕ್ರಮವಾಗಿ 65 (45 ಎಸೆತ, 5*4, 3*6) ಹಾಗೂ 49(24) ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಉಳಿದಂತೆ ನಬಿ 23, ನಾಯಕ ಹಾರ್ದಿಕ್‌ ಪಾಂಡ್ಯ 10, ಟಿಮ್‌ ಡೇವಿಡ್‌ 3, ಕಾಟ್ಜಿ ಶೂನ್ಯ, ಚಾವ್ಲಾ ಹಾಗೂ ಬುಮ್ರಾ ಔಟಾಗದೇ ಕ್ರಮವಾಗಿ 1, 2 ರನ್‌ ಗಳಿಸಿದರು.

ರಾಜಸ್ಥಾನ್‌ ಪರ ಶಿಸ್ತುಬದ್ಧ ಬೌಲಿಂಗ್‌ ಮಾಡಿದ ಸಂದೀಪ್‌ ಶರ್ಮಾ 4ಓವರ್‌ ಬೌಲಿಂಗ್‌ ಮಾಡಿ 18 ರನ್‌ ನೀಡಿ ಪ್ರಮುಖ 5 ವಿಕೆಟ್‌ ಕಬಳಿಸಿ ಮಿಂಚಿದರು. ಟ್ರೆಂಟ್‌ ಬೌಲ್ಟ್‌ 2, ಚಾಹಲ್‌ ಮತ್ತು ಆವೇಶ್‌ ಖಾನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ರಾಜಸ್ಥಾನ್‌ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಆರ್‌ಆರ್‌ಗೆ ಉತ್ತಮ ಆರಂಭ ಕಂಡುಬಂದಿತು. ಜೋಸ್‌ ಬಟ್ಲರ್‌ ಹಾಗೂ ಜೈಸ್ವಾಲ್‌ ಪವರ್‌ ಪ್ಲೇ ನಲ್ಲಿ 61ರನ್‌ ಗಳ ಜತೆಯಾಟ ನೀಡಿದರು. ಬಟ್ಲರ್‌ 35(25) ಗಳಿಸಿದರೇ, ಜೈಸ್ವಾಲ್‌ ಹಾಗೂ ನಾಯಕ ಸಂಜು ಸ್ಯಾಮ್ಸನ್‌ ಈ ಇಬ್ಬರು ಜತೆಯಾಗಿ ಮುಂಬೈ ಬೌಲರ್‌ಗಳ ಬೆಂಡೆತ್ತಿದರು. ಈ ಇಬ್ಬರು ವಿಕೆಟ್‌ ನೀಡದೇ ಮುಂಬೈ ನೀಡಿದ್ದ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿ ಗೆಲುವಿನ ನಗೆ ಬೀರಿದರು.

ಇತ್ತ ಜೈಸ್ವಾಲ್‌ ಮುಂಬೈ ವಿರುದ್ಧ ಐಪಿಎಲ್‌ನಲ್ಲಿ ಎರಡನೇ ಶತಕ ದಾಖಲಿಸಿದರು. ಇವರು 60 ಎಸೆತಗಳಲ್ಲಿ 9ಬೌಂಡರಿ ಹಾಗೂ 7ಸಿಕ್ಸರ್‌ ಸಹಿತ 104 ಭರ್ಜರಿ ಶತಕ ಬಾರಿಸಿ ಮಿಂಚಿದರು. ಜೈಸ್ವಾಲ್‌ಗೆ ಸಾಥ್‌ ನೀಡಿದ ನಾಯಕ ಸಂಜು 38(28) ರನ್‌ಗಳಿಸಿ ಔಟಾಗದೇ ಉಳಿದು ಪಂದ್ಯ ಮುಗಿಸಿದರು.

ಮುಂಬೈ ಪರ ಪಿಯೂಷ್‌ ಚಾವ್ಲಾ ಒಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

1 hour ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

1 hour ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

1 hour ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

1 hour ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

1 hour ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

1 hour ago