ಕ್ರೀಡೆ

RSWS 2022 final ನಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ

ಮುಂಬೈ : ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಲೆಜೆಂಡ್ಸ್ ಲೀಗ್ (RSWS 2022 final) ಕ್ರಿಕೆಟ್ ನಲ್ಲಿ ಭಾರತವು ಶ್ರೀಲಂಕಾ ವಿರುದ್ಧ ಜಯಗಳಿಸಿದೆ.

ಫೈನಲ್‍ನಲ್ಲಿ ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ಭಾರತದ ನಮನ್ ಓಜಾ ಶತಕ ಸಿಡಿಸಿ ತಮ್ಮ ಅಬ್ಬರದಾಟ ಪ್ರದರ್ಶನದಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಬಾರಿಸಿತು. 196 ರನ್‍ಗಳ ಗುರಿ ಪಡೆದ ಶ್ರೀಲಂಕಾ ಲೆಜೆಂಡ್ಸ್ ಕನ್ನಡಿಗ ವಿನಯ್ ಕುಮಾರ್ ದಾಳಿಗೆ ನಲುಗಿ 162 ರನ್‍ಗಳಿಗೆ ಸರ್ವಪತನ ಕಂಡು ಸೋಲುಂಡಿದೆ.

ಶ್ರೀಲಂಕಾ ಪರ ಇಶಾನ್ ಜಯರತ್ನ ಅರ್ಧಶತಕ ಸಿಡಿಸಿದ್ದನ್ನು ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮ್ಯಾನ್‌ಗಳು ಭಾರತದ ಲೆಜೆಂಡ್ಸ್ ಆಟಗಾರರ ಬೌಲಿಂಗೆ ಬೆದರಿದರು. ಪರಿಣಾಮವಾಗಿ 18.5 ಓವರ್‌ಗಳ ಅಂತ್ಯಕ್ಕೆ 162 ರನ್‍ಗೆ ಆಲೌಟ್ ಆದರು. ಭಾರತದ ಪರ ವಿನಯ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರೆ, ಅಭಿಮನ್ಯು ಮಿಥುನ್ 2 ಮತ್ತು ಸ್ಟುವರ್ಟ್ ಬಿನ್ನಿ, ರಾಜೇಶ್ ಪವರ್, ರಾಹುಲ್ ಶರ್ಮಾ, ಯೂಸುಫ್ ಪಠಾಣ್ ತಲಾ 1 ವಿಕೆಟ್ ಬಡಿಸಿದರು

 

andolanait

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

6 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

7 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

7 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

8 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

8 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

8 hours ago