ಕ್ರೀಡೆ

RSWS 2022 final ನಲ್ಲಿ ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ

ಮುಂಬೈ : ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಲೆಜೆಂಡ್ಸ್ ಲೀಗ್ (RSWS 2022 final) ಕ್ರಿಕೆಟ್ ನಲ್ಲಿ ಭಾರತವು ಶ್ರೀಲಂಕಾ ವಿರುದ್ಧ ಜಯಗಳಿಸಿದೆ.

ಫೈನಲ್‍ನಲ್ಲಿ ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ಭಾರತದ ನಮನ್ ಓಜಾ ಶತಕ ಸಿಡಿಸಿ ತಮ್ಮ ಅಬ್ಬರದಾಟ ಪ್ರದರ್ಶನದಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಬಾರಿಸಿತು. 196 ರನ್‍ಗಳ ಗುರಿ ಪಡೆದ ಶ್ರೀಲಂಕಾ ಲೆಜೆಂಡ್ಸ್ ಕನ್ನಡಿಗ ವಿನಯ್ ಕುಮಾರ್ ದಾಳಿಗೆ ನಲುಗಿ 162 ರನ್‍ಗಳಿಗೆ ಸರ್ವಪತನ ಕಂಡು ಸೋಲುಂಡಿದೆ.

ಶ್ರೀಲಂಕಾ ಪರ ಇಶಾನ್ ಜಯರತ್ನ ಅರ್ಧಶತಕ ಸಿಡಿಸಿದ್ದನ್ನು ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮ್ಯಾನ್‌ಗಳು ಭಾರತದ ಲೆಜೆಂಡ್ಸ್ ಆಟಗಾರರ ಬೌಲಿಂಗೆ ಬೆದರಿದರು. ಪರಿಣಾಮವಾಗಿ 18.5 ಓವರ್‌ಗಳ ಅಂತ್ಯಕ್ಕೆ 162 ರನ್‍ಗೆ ಆಲೌಟ್ ಆದರು. ಭಾರತದ ಪರ ವಿನಯ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರೆ, ಅಭಿಮನ್ಯು ಮಿಥುನ್ 2 ಮತ್ತು ಸ್ಟುವರ್ಟ್ ಬಿನ್ನಿ, ರಾಜೇಶ್ ಪವರ್, ರಾಹುಲ್ ಶರ್ಮಾ, ಯೂಸುಫ್ ಪಠಾಣ್ ತಲಾ 1 ವಿಕೆಟ್ ಬಡಿಸಿದರು

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago