ಕ್ರೀಡೆ

SA20: ಚಾಂಪಿಯನ್ಸ್ ಪಟ್ಟ ಅಲಂಕರಿಸಿದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್

ನ್ಯೂಲೆಂಡ್ಸ್‌: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಎಡನ್‌ ಮಾರ್ಕ್ರಂ ನಾಯಕತ್ವದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಚಾಂಪಿಯನ್ಸ್​ ಆಗಿ ಹೊರಹೊಮ್ಮಿದೆ.

ಕೇಪ್​ಟೌನ್​​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ವಿರುದ್ಧ 89 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಟಾಸ್ ಗೆದ್ದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಇನಿಂಗ್ಸ್ ಆರಂಭಿಸಿದ ಜೋರ್ಡನ್ ಹರ್ಮನ್ 26 ಎಸೆತಗಳಲ್ಲಿ 42 ರನ್​ ಬಾರಿಸುವ ಮೂಲಕ ಸನ್​ರೈಸರ್ಸ್​ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಡೇವಿಡ್ ಮಲಾನ್ ಕೇವಲ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

ಈ ವೇಳೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಟಾಮ್ ಅಬೆಲ್ 34 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 55 ರನ್​ ಚಚ್ಚಿದ್ದರು. ಇನ್ನು ನಾಯಕ ಐಡೆನ್ ಮಾರ್ಕ್ರಾಮ್ 26 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 42 ರನ್ ಬಾರಿಸಿದರು.

ಅಂತಿಮ ಹಂತದಲ್ಲಿ ಅಬ್ಬರಿಸಿದ ಯುವ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ 30 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 56 ರನ್​ ಸಿಡಿಸಿದರು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಕಲೆಹಾಕಿತು.

205 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಡರ್ಬನ್ ಸೂಪರ್ ಜೈಂಟ್ಸ್ ತಂಡವು ಯಾವುದೇ ಹಂತದಲ್ಲೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಲಾಗಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸ್ಟಾರ್ ಆಟಗಾರ ಕ್ವಿಂಟನ್ ಡಿಕಾಕ್ 3 ರನ್ ಬಾರಿಸಿ ವಾರೊಲ್​ಗೆ ವಿಕೆಟ್​ ಒಪ್ಪಿಸಿದರೆ, ಮ್ಯಾಥ್ಯೂ ಬ್ರೀಟ್​​ಝ್ಕಿ 18 ರನ್​ಗಳಿಸಲು 27 ಎಸೆತಗಳನ್ನು ತೆಗೆದುಕೊಂಡಿದ್ದರು.

ಈ ಹಂತದಲ್ಲಿ ದಾಳಿಗಿಳಿದ ಮಾರ್ಕೊ ಯಾನ್ಸೆನ್ ಸ್ಮಟ್ಸ್ (1), ಭಾನುಕಾ ರಾಜಪಕ್ಸೆ (0) ವಿಕೆಟ್ ಪಡೆದ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇನ್ನು ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವಲ್ಲಿ ಬಾರ್ಟ್​ಮ್ಯಾನ್ ಯಶಸ್ವಿಯಾದರು. ಕೇವಲ 65 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡ ಡರ್ಬನ್ ತಂಡವು ಆ ಬಳಿಕ ಚೇತರಿಸಿಕೊಳ್ಳಲೇ ಇಲ್ಲ.

ಅಂತಿಮವಾಗಿ 17 ಓವರ್​ಗಳಲ್ಲಿ 115 ರನ್​ಗಳಿಗೆ ಆಲೌಟ್ ಆಗುವ ಮೂಲಕ ಡರ್ಬನ್ ಸೂಪರ್ ಜೈಂಟ್ಸ್ ತಂಡವು 89 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

ಪಂದ್ಯ ಶ್ರೇಷ್ಠ: ಟಾಮ್‌ ಎಬೆಲ್‌

ಸರಣಿ ಶ್ರೇಷ್ಠ: ಎನ್ರಿಚ್‌ ಕ್ಲಾಸೆನ್‌

andolanait

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

5 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

21 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

38 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

51 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago