ಕ್ರೀಡೆ

SA20: ಚಾಂಪಿಯನ್ಸ್ ಪಟ್ಟ ಅಲಂಕರಿಸಿದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್

ನ್ಯೂಲೆಂಡ್ಸ್‌: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಎಡನ್‌ ಮಾರ್ಕ್ರಂ ನಾಯಕತ್ವದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಚಾಂಪಿಯನ್ಸ್​ ಆಗಿ ಹೊರಹೊಮ್ಮಿದೆ.

ಕೇಪ್​ಟೌನ್​​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ವಿರುದ್ಧ 89 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಟಾಸ್ ಗೆದ್ದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಇನಿಂಗ್ಸ್ ಆರಂಭಿಸಿದ ಜೋರ್ಡನ್ ಹರ್ಮನ್ 26 ಎಸೆತಗಳಲ್ಲಿ 42 ರನ್​ ಬಾರಿಸುವ ಮೂಲಕ ಸನ್​ರೈಸರ್ಸ್​ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಡೇವಿಡ್ ಮಲಾನ್ ಕೇವಲ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

ಈ ವೇಳೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಟಾಮ್ ಅಬೆಲ್ 34 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 55 ರನ್​ ಚಚ್ಚಿದ್ದರು. ಇನ್ನು ನಾಯಕ ಐಡೆನ್ ಮಾರ್ಕ್ರಾಮ್ 26 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 42 ರನ್ ಬಾರಿಸಿದರು.

ಅಂತಿಮ ಹಂತದಲ್ಲಿ ಅಬ್ಬರಿಸಿದ ಯುವ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ 30 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 56 ರನ್​ ಸಿಡಿಸಿದರು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಕಲೆಹಾಕಿತು.

205 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಡರ್ಬನ್ ಸೂಪರ್ ಜೈಂಟ್ಸ್ ತಂಡವು ಯಾವುದೇ ಹಂತದಲ್ಲೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಲಾಗಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸ್ಟಾರ್ ಆಟಗಾರ ಕ್ವಿಂಟನ್ ಡಿಕಾಕ್ 3 ರನ್ ಬಾರಿಸಿ ವಾರೊಲ್​ಗೆ ವಿಕೆಟ್​ ಒಪ್ಪಿಸಿದರೆ, ಮ್ಯಾಥ್ಯೂ ಬ್ರೀಟ್​​ಝ್ಕಿ 18 ರನ್​ಗಳಿಸಲು 27 ಎಸೆತಗಳನ್ನು ತೆಗೆದುಕೊಂಡಿದ್ದರು.

ಈ ಹಂತದಲ್ಲಿ ದಾಳಿಗಿಳಿದ ಮಾರ್ಕೊ ಯಾನ್ಸೆನ್ ಸ್ಮಟ್ಸ್ (1), ಭಾನುಕಾ ರಾಜಪಕ್ಸೆ (0) ವಿಕೆಟ್ ಪಡೆದ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇನ್ನು ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವಲ್ಲಿ ಬಾರ್ಟ್​ಮ್ಯಾನ್ ಯಶಸ್ವಿಯಾದರು. ಕೇವಲ 65 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡ ಡರ್ಬನ್ ತಂಡವು ಆ ಬಳಿಕ ಚೇತರಿಸಿಕೊಳ್ಳಲೇ ಇಲ್ಲ.

ಅಂತಿಮವಾಗಿ 17 ಓವರ್​ಗಳಲ್ಲಿ 115 ರನ್​ಗಳಿಗೆ ಆಲೌಟ್ ಆಗುವ ಮೂಲಕ ಡರ್ಬನ್ ಸೂಪರ್ ಜೈಂಟ್ಸ್ ತಂಡವು 89 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

ಪಂದ್ಯ ಶ್ರೇಷ್ಠ: ಟಾಮ್‌ ಎಬೆಲ್‌

ಸರಣಿ ಶ್ರೇಷ್ಠ: ಎನ್ರಿಚ್‌ ಕ್ಲಾಸೆನ್‌

andolanait

Recent Posts

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

9 mins ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

29 mins ago

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

50 mins ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

1 hour ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

3 hours ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…

3 hours ago